ಉಡುಪಿ, : ಕನ್ನಡ ಚಲನಚಿತ್ರ ನಟ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಂದು ಬೆಳಗ್ಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದಾರೆ.
ಕೃಷ್ಣ ಮಠದಲ್ಲಿ ಪರ್ಯಾಯ ಸ್ವಾಮೀಜಿಯವರು ಯೋಜಿಸಿರುವ ಸುವರ್ಣ ಗೋಪುರದ ಮಾದರಿಯನ್ನು ದೀಪ ಬೆಳಗಿಸಿ, ಹುಂಡಿಗೆ ಚಿನ್ನದ ಕಾಣಿಕೆಯನ್ನು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು.
ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಲೇಪನ ಮಾಡಿಸಲಾಗುತ್ತಿದ್ದು, ಚಿನ್ನದ ತಗಡನ್ನು ಮಾಡಲು ರಾಜಕೋಟ್ ನಿಂದ ತರಿಸಿದ ನೂತನ ರೋಲಿಂಗ್ ಯಂತ್ರಕ್ಕೆ ಸ್ವಿಚ್ ಹಾಕುವುದರೊಂದಿಗೆ ಪುನೀತ್ ರಾಜ್ಕುಮಾರ್ ಚಾಲನೆ ನೀಡಿದರು. ಹಾಗೆಯೇ ಶ್ರೀ ಕೃಷ್ಣನ ದರ್ಶನ ಪಡೆದ ಬಳಿಕ ಪರ್ಯಾಯ ಪಲಿಮಾರು ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಸುವರ್ಣ ಗೋಪುರದ ಮಾದರಿಯನ್ನು ಉದ್ಘಾಟಿಸಿದರು.
ಈ ಸಂದರ್ಭ ಕಡಗೋಲು ಕೃಷ್ಣ, ಮುಖ್ಯಪ್ರಾಣರ ದರ್ಶನ ಮಾಡಿದ ಪುನೀತ್ ,ಈ ಹಿಂದೆ ಅಪ್ಪಾಜಿ ಜೊತೆ ಹಲವು ಬಾರಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದೆ. ಆ ದಿನಗಳು ಯಾವತ್ತಿಗೂ ಮರೆಯಲಾಗದು ಎಂದು ತಂದೆ ಜೊತೆ ಕೃಷ್ಣ ಮಠಕ್ಕೆ ಆಗಮಿಸಿದ ದಿನಗಳನ್ನು ನೆನೆಪಿಸಿಕೊಂಡರು.
ತನ್ನ ನೂತನ ಚಲನಚಿತ್ರ ‘ನಟಸಾರ್ವಭೌಮ’ವನ್ನು ಗೆಲ್ಲಿಸಿದ್ದಕ್ಕೆ ಕನ್ನಡ ಪ್ರೇಕ್ಷಕರಿಗೆ ಪುನೀತ್ ಕೃತಜ್ಞತೆ ಸಲ್ಲಿಸಿದರು.
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…