ಉಡುಪಿ: ಸಪ್ತೋತ್ಸವದ ಆರನೇ ದಿನವಾದ ಮಂಗಳವಾರ ರಾತ್ರಿ ಶ್ರೀಕೃಷ್ಣ ಮಠದಲ್ಲಿ ಮಕರ ಸಂಕ್ರಾಂತಿಯ ಅಂಗವಾಗಿ ಪರ್ಯಾಯ ಕೃಷ್ಣಾಪುರ ಮಠಾಧೀಶರ ನೇತೃತ್ವದಲ್ಲಿ ಆಕರ್ಷಕ ಮೂರು ತೇರು ಉತ್ಸವ ನಡೆಯಿತು. ಆಕರ್ಷಕ ಮೂರು ತೇರು ಉತ್ಸವ ನಡೆಯಿತು.
ದಕ್ಷಿಣಾಯಣದ ಆರು ತಿಂಗಳ ಅವಧಿಯ ಕೊನೆಯ ದಿನವಾದ ಮಕರ ಸಂಕ್ರಮಣದ ದಿನದಂದು ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಮಠದ ಸಂಪ್ರದಾಯದಂತೆ ಮೂರು ರಥವನ್ನು ಎಳೆಯುವ ಉತ್ಸವ ಅನಾದಿ ಕಾಲದಿಂದಲೂ ನಡೆದು ಕೊಂಡು ಬರುತ್ತಿದೆ.
ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ದಿನವೆಂದು ಹೇಳಲಾದ ಮಕರಸಂಕ್ರಮಣದಂದು ರಾತ್ರಿ ರಥಬೀದಿಯಲ್ಲಿ ಮೂರು ತೇರು ಉತ್ಸವ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯುವುದು ಸಂಪ್ರದಾಯವಾಗಿದೆ. ಚಿನ್ನದ ಪಲ್ಲಕ್ಕಿಯಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣರನ್ನು ತಂದು ರಥಗಳಲ್ಲಿ ಕುಳ್ಳಿರಿಸಲಾಯಿತು. ಚಿಕ್ಕ ರಥದಲ್ಲಿ ಮುಖ್ಯಪ್ರಾಣ, ಮಧ್ಯ ರಥದಲ್ಲಿ ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ ಹಾಗೂ ಬ್ರಹ್ಮರಥದಲ್ಲಿ ಕೃಷ್ಣನನ್ನು ಕುಳ್ಳಿರಿಸಿ ರಥಬೀದಿಗೆ ಒಂದು ಸುತ್ತು ಬರಲಾಯಿತು.
ಮೂರು ತೇರು ಉತ್ಸವದಲ್ಲಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹಾಗೂ ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಭಾಗವಹಿಸಿದ್ದರು.
ರಂಗುರಂಗಿನ ವಿದ್ಯುದ್ದೀಪಗಳಿಂದ ಅಲಂಕೃತ ಮಧ್ವ ಸರೋವರದಲ್ಲಿ ಶ್ರೀಕೃಷ್ಣ -ಮುಖ್ಯ ಪ್ರಾಣರಿಗೆ ತೆಪ್ಪೋತ್ಸವವೂ ನಡೆಯಿತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…