Featured

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ದಾಂಧಲೆ ; 8 ಮಂದಿ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದಲ್ಲಿ ದಾಂಧಲೆ ; 8 ಮಂದಿ ಅಯ್ಯಪ್ಪ ಮಾಲಾಧಾರಿಗಳ ಬಂಧನ

ಮಠದ ದಿವಾನ, ಸಿಬ್ಬಂದಿ, ಪೊಲೀಸ್ ಕಾನ್ಸ್‌ಸ್ಟೇಬಲ್‌ಗೆ ಹಲ್ಲೆ

ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆ ಬಂದ ಅಯ್ಯಪ್ಪ ಮಾಲಧಾರಿಗಳು ದಾಂಧಲೆ ನಡೆಸಿ, ಮಠದ ಸಿಬ್ಬಂದಿ, ದಿವಾನರಿಗೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಘಟನೆ ಡಿ.29ರಂದು ರಾತ್ರಿ ವೇಳೆ ನಡೆದಿದ್ದು, ಈ ಸಂಬಂಧ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬಂಧಿತರನ್ನು ಅಯ್ಯಪ್ಪಮಾಲಧಾರಿಗಳಾದ ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್‌ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಎಂದು ಗುರುತಿಸಲಾಗಿದೆ.

ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿದ್ದು, ಈ ವೇಳೆ ದೇವರ ದರ್ಶನಕ್ಕೆ ಬಂದಿದ್ದ ಸುಮಾರು 7-8 ಜನ ಅಯ್ಯಪ್ಪ ಮಾಲಾಧಾರಿಗಳು ದಾಂಧಲೆ ನಡೆಸಿದರೆನ್ನಲಾಗಿದೆ. ಅಲ್ಲದೆ ರಥಬೀದಿಯಲ್ಲಿ ನಡೆಯುವ ರಥೋತ್ಸವದ ದೇವರ ಉತ್ಸವ ಮೂರ್ತಿ ಪಲ್ಲಕ್ಕಿಯೊಂದಿಗೆ ಕೃಷ್ಣಮಠದ ಮುಂಭಾಗದಿಂದ ಒಳಭಾಗಕ್ಕೆ ಬರುವ ವೇಳೆ ದಾಂಧಲೆ ನಡೆಸಿದ ಅಯ್ಯಪ್ಪ ಮಾಲಾಧಾರಿಗಳು ಕೃಷ್ಣಮಠದ ಸಿಬ್ಬಂದಿ ಜಗದೀಶ ಎಂಬವರಿಗೆ ಕೈಯಿಂದ ಹಲ್ಲೆ ಮಾಡಿದರು.

ಆತನನ್ನು ಅವರೆಲ್ಲರೂ ಸೇರಿ ಮೇಲೆತ್ತಿಕೊಂಡು ಶ್ರೀಕೃಷ್ಣ ಮಠದ ಗರ್ಭ ಗುಡಿಯ ಒಳಗಡೆ ಬಂದಿದ್ದು, ಆಗ ಮಠದ ದಿವಾನ ನಾಗರಾಜ ಆಚಾರ್ಯ, ಅಯ್ಯಪ್ಪಮಾಲಾಧಾರಿಗಳನ್ನು ತಡೆಯಲು ಪ್ರಯತ್ನಿಸಿದರು. ಆಗ ಅವರೆಲ್ಲ ನಾಗರಾಜ ಆಚಾರ್ಯರ ಮೇಲೂ ಹಲ್ಲೆಗೆ ಮುಂದಾದರೆನ್ನಲಾಗಿದೆ. ಈ ಸಂದರ್ಭ ಕೃಷ್ಣಮಠದಲ್ಲಿ ಭದ್ರತಾ ಕರ್ತವ್ಯ ಹಾಗೂ ಪಿಆರ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸಟೇಬಲ್ ರವೀಂದ್ರ ಗಲಾಟೆ ಮಾಡದಂತೆ ಅಯ್ಯಪ್ಪ ಮಾಲಧಾರಿಗಳನ್ನು ಸಮಾಧಾನ ಮಾಡಿ ತಡೆಯಲು ಹೋದರು.

ಈ ವೇಳೆ ಅಯ್ಯಪ್ಪ ಮಾಲಧಾರಿಗಳು ಪೊಲೀಸ್ ಸಿಬ್ಬಂದಿಗೆ ಕೈಯಿಂದ ಮುಖಕ್ಕೆ, ಮೈಕೈಗೆ, ಕೆನ್ನೆಗೆ ಹಲ್ಲೆ ಮಾಡಿದರು. ಇದರಿಂದ ಅವರಿಗೆ ಗಾಯ ಉಂಟಾಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾನ್ಸಟೇಬಲ್ ರವೀಂದ್ರ ನೀಡಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದರಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago