ಉಡುಪಿ: ಪಾಂಚಜನ್ಯ ಊದಲು ಪ್ರಧಾನಿ ಮೋದಿಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ. ರಾಮಮಂದಿರದಲ್ಲಿ ರಾಮಧ್ವಜವನ್ನು ಮೋದಿ ಹಾರಿಸಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ. ಭಗವದ್ಗೀತೆ ಸಮಾವೇಶ ದೇಶದಲ್ಲಿ ಸಾಂಸ್ಕೃತಿಕ, ಧಾರ್ಮಿಕ ವಾತಾವರಣ ನಿರ್ಮಾಣ ಮಾಡಲಿದೆ. ರಾಜ್ಯಪಾಲರಾದ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರು ಮತ್ತು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಎನ್ಡಿಎ ಒಕ್ಕೂಟದಲ್ಲೂ ಕೂಡ ಈ ಬಗ್ಗೆ ಮಾತುಕತೆ ಮಾಡುತ್ತೇವೆ. ರಾಜ್ಯದ ಹಿತ ಮರೆತಿರುವ ಸರ್ಕಾರವನ್ನು ಬಯಲಿಗೆಳೆಯುತ್ತೇವೆ. ಜಾತಿ, ಸಮಾಜವನ್ನು ಕಾಂಗ್ರೆಸ್ ಒಡೆದಿದೆ. ಕುರ್ಚಿಯನ್ನು ಉಳಿಸಿಕೊಳ್ಳಲು ಸ್ವಾಮೀಜಿಗಳ ಬಾಯಲ್ಲಿ ಹೇಳಿಕೆ ಕೊಡಿಸುತ್ತಿದ್ದಾರೆ. ಗೊಂದಲದ ವಾತಾವರಣವನ್ನು ಸಿಎಂ, ಡಿಸಿಎಂ ಸೃಷ್ಟಿ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ, ದಲಿತ ನಾಯಕ ಖರ್ಗೆಯನ್ನು ಕಡೆಗಣಿಸಲಾಗಿದೆ. ಸ್ವತಃ ರಾಷ್ಟ್ರೀಯ ಅಧ್ಯಕ್ಷರೇ ಹೈಕಮಾಂಡ್ ಎನ್ನುತ್ತಾರೆ. ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಮಾಡಲು ಮುಂದಾಗಲ್ಲ. ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು ನೋಡುತ್ತಿದ್ದೇವೆ. ಡಿಸಿಎಂ ಜೊತೆ 140 ಜನ ಎಲ್ಲಿದ್ದಾರೆ? ರಾಹುಲ್ ಗಾಂಧಿ, ಸಿಎಂ ಅವರ ಜೊತೆಯಲ್ಲಿ ಇಲ್ಲ. ಲಾಬಿ, ರಂಪಾಟ, ಡೆಲ್ಲಿ ಟೂರ್ಗೆ ಏನು ಕಾರಣ ಎಂದು ಪ್ರಶ್ನಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…