Featured

ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ : ಪ್ರಮೋದ್ ಮಧ್ವರಾಜ್ – vishwanews24

ನನ್ನ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ..

ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ತಪ್ಪಿಸಿದ್ದು ಯಾರೆಂಬುದು ಗೊತ್ತಿಲ್ಲ : ಪ್ರಮೋದ್ ಮಧ್ವರಾಜ್

ಹಾಲು ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್‌ ಮಧ್ವರಾಜ್ ಬೆರೆತಿದ್ದೇವೆ : ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದನ್ನು ಪ್ರಧಾನಿ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ದೂರುದಲ್ಲಿ ನಿಂತು ನೋಡುವ ಆಸೆ ನನಗೆ ಇತ್ತು. ಕಾರಣಾಂತರಗಳಿಂದ ಅದು ತಪ್ಪಿ ಹೋಗಿದೆ. ಅದರ ಬಗ್ಗೆ ಕಿಂಚಿತ್ತೂ ಬೇಸರವಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು.

ಕನಕನ ಕಿಂಡಿಗೆ ಸ್ವರ್ಣ ಕವಚವನ್ನು ಸೇವೆಯ ರೂಪದಲ್ಲಿ ನೀಡಿದ ಪ್ರಮೋದ್‌ ಮಧ್ವರಾಜ್ ಅವರನ್ನು ಕಾರ್ಯಕ್ರಮದಲ್ಲಿ ಕಡೆಗಣಿಸಿದ್ದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುವುದನ್ನು ಯಾರು ತಪ್ಪಿಸಿದ್ದರೆ ಅಂತಾ ನನಗೆ ಗೊತ್ತಿಲ್ಲ. ಯಾರಾದರೂ ತಪ್ಪಿಸಿದ್ದರೆ ಅದು ಅವರ ರಾಜಕೀಯ ತಪ್ಪು ಹೆಜ್ಜೆ ಎಂದು ಟಾಂಗ್ ನೀಡಿದರು.

ಶ್ರೀ ಪುತ್ತಿಗೆ ಮಠವಾಗಲಿ ಅಥವಾ ಜಿಲ್ಲಾ ಬಿಜೆಪಿ ಆಗಲಿ ನನಗೆ ಕಾರ್ಯಕ್ರಮದಲ್ಲಿ ಪ್ರವೇಶ ನಿರಾಕರಿಸಿದ್ದಕ್ಕೆ ಕಾರಣಕರ್ತರಲ್ಲ. ಯಾರ ಮೇಲೂ ನಾನು ಗೂಬೆ ಕೂರಿಸುವ ಪ್ರಯತ್ನ ಮಾಡುವುದಿಲ್ಲ. ಯಾರನ್ನೂ ಟೀಕೆ ಮಾಡುವುದಿಲ್ಲ. ನನ್ನ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ. ನನ್ನನ್ನು ಕಡೆಗಣಿಸಿದ್ದಕ್ಕೆ ಯಾರು ಕಾರಣ ಎಂಬುದೂ ನನಗೆ ಗೊತ್ತಿಲ್ಲ ಎಂದರು.

ಇದೇ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಠದವರು ಮತ್ತು ನಾವು ಕಳಿಸಿದ ಪಟ್ಟಿಯಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರು ಇತ್ತು. ಆದರೆ ಪ್ರಧಾನಿ ಕಛೇರಿಯಿಂದ ಪಟ್ಟಿಯನ್ನು ಪರಿಷ್ಕೃತಗೊಳಿಸಿ ಕಳಿಸುವಾಗ ಪ್ರಮೋದ್ ಮಧ್ವರಾಜ್ ಅವರ ಹೆಸರು ಇರಲಿಲ್ಲ. ಜೊತೆಗೆ ಹಲವರ ಹೆಸರು ಇರಲಿಲ್ಲ.ಇದಕ್ಕೆ ಜಿಲ್ಲಾ ಬಿಜೆಪಿ ಯಾವುದೇ ರೀತಿಯಲ್ಲೂ ಕಾರಣ ಅಲ್ಲ. ಅದನ್ನು ಪ್ರಮೋದ್ ಮಧ್ವರಾಜ್ ಅವರೇ ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹಾಲು ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್‌ ಮಧ್ವರಾಜ್ ಬೆರೆತಿದ್ದೇವೆ. ಒಟ್ಟಾರೆ ರೋಡ್ ಶೋ ಮತ್ತು ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ್ ಶೆಟ್ಟಿ, ಶ್ರೀಕಾಂತ್ ನಾಯಕ್, ದಿವಾಕರ ಶೆಟ್ಟಿ, ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

4 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

4 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

4 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

5 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

5 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

6 hours ago