Featured

ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ : ಪ್ರಮೋದ್ ಮಧ್ವರಾಜ್ – vishwanews24

ನನ್ನ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ..

ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ತಪ್ಪಿಸಿದ್ದು ಯಾರೆಂಬುದು ಗೊತ್ತಿಲ್ಲ : ಪ್ರಮೋದ್ ಮಧ್ವರಾಜ್

ಹಾಲು ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್‌ ಮಧ್ವರಾಜ್ ಬೆರೆತಿದ್ದೇವೆ : ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದನ್ನು ಪ್ರಧಾನಿ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ದೂರುದಲ್ಲಿ ನಿಂತು ನೋಡುವ ಆಸೆ ನನಗೆ ಇತ್ತು. ಕಾರಣಾಂತರಗಳಿಂದ ಅದು ತಪ್ಪಿ ಹೋಗಿದೆ. ಅದರ ಬಗ್ಗೆ ಕಿಂಚಿತ್ತೂ ಬೇಸರವಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು.

ಕನಕನ ಕಿಂಡಿಗೆ ಸ್ವರ್ಣ ಕವಚವನ್ನು ಸೇವೆಯ ರೂಪದಲ್ಲಿ ನೀಡಿದ ಪ್ರಮೋದ್‌ ಮಧ್ವರಾಜ್ ಅವರನ್ನು ಕಾರ್ಯಕ್ರಮದಲ್ಲಿ ಕಡೆಗಣಿಸಿದ್ದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುವುದನ್ನು ಯಾರು ತಪ್ಪಿಸಿದ್ದರೆ ಅಂತಾ ನನಗೆ ಗೊತ್ತಿಲ್ಲ. ಯಾರಾದರೂ ತಪ್ಪಿಸಿದ್ದರೆ ಅದು ಅವರ ರಾಜಕೀಯ ತಪ್ಪು ಹೆಜ್ಜೆ ಎಂದು ಟಾಂಗ್ ನೀಡಿದರು.

ಶ್ರೀ ಪುತ್ತಿಗೆ ಮಠವಾಗಲಿ ಅಥವಾ ಜಿಲ್ಲಾ ಬಿಜೆಪಿ ಆಗಲಿ ನನಗೆ ಕಾರ್ಯಕ್ರಮದಲ್ಲಿ ಪ್ರವೇಶ ನಿರಾಕರಿಸಿದ್ದಕ್ಕೆ ಕಾರಣಕರ್ತರಲ್ಲ. ಯಾರ ಮೇಲೂ ನಾನು ಗೂಬೆ ಕೂರಿಸುವ ಪ್ರಯತ್ನ ಮಾಡುವುದಿಲ್ಲ. ಯಾರನ್ನೂ ಟೀಕೆ ಮಾಡುವುದಿಲ್ಲ. ನನ್ನ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ. ನನ್ನನ್ನು ಕಡೆಗಣಿಸಿದ್ದಕ್ಕೆ ಯಾರು ಕಾರಣ ಎಂಬುದೂ ನನಗೆ ಗೊತ್ತಿಲ್ಲ ಎಂದರು.

ಇದೇ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಠದವರು ಮತ್ತು ನಾವು ಕಳಿಸಿದ ಪಟ್ಟಿಯಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರು ಇತ್ತು. ಆದರೆ ಪ್ರಧಾನಿ ಕಛೇರಿಯಿಂದ ಪಟ್ಟಿಯನ್ನು ಪರಿಷ್ಕೃತಗೊಳಿಸಿ ಕಳಿಸುವಾಗ ಪ್ರಮೋದ್ ಮಧ್ವರಾಜ್ ಅವರ ಹೆಸರು ಇರಲಿಲ್ಲ. ಜೊತೆಗೆ ಹಲವರ ಹೆಸರು ಇರಲಿಲ್ಲ.ಇದಕ್ಕೆ ಜಿಲ್ಲಾ ಬಿಜೆಪಿ ಯಾವುದೇ ರೀತಿಯಲ್ಲೂ ಕಾರಣ ಅಲ್ಲ. ಅದನ್ನು ಪ್ರಮೋದ್ ಮಧ್ವರಾಜ್ ಅವರೇ ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹಾಲು ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್‌ ಮಧ್ವರಾಜ್ ಬೆರೆತಿದ್ದೇವೆ. ಒಟ್ಟಾರೆ ರೋಡ್ ಶೋ ಮತ್ತು ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ್ ಶೆಟ್ಟಿ, ಶ್ರೀಕಾಂತ್ ನಾಯಕ್, ದಿವಾಕರ ಶೆಟ್ಟಿ, ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 hour ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 hour ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

2 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

2 hours ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

2 hours ago