Featured

ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ : ಪ್ರಮೋದ್ ಮಧ್ವರಾಜ್ – vishwanews24

ನನ್ನ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ..

ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ತಪ್ಪಿಸಿದ್ದು ಯಾರೆಂಬುದು ಗೊತ್ತಿಲ್ಲ : ಪ್ರಮೋದ್ ಮಧ್ವರಾಜ್

ಹಾಲು ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್‌ ಮಧ್ವರಾಜ್ ಬೆರೆತಿದ್ದೇವೆ : ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದನ್ನು ಪ್ರಧಾನಿ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ದೂರುದಲ್ಲಿ ನಿಂತು ನೋಡುವ ಆಸೆ ನನಗೆ ಇತ್ತು. ಕಾರಣಾಂತರಗಳಿಂದ ಅದು ತಪ್ಪಿ ಹೋಗಿದೆ. ಅದರ ಬಗ್ಗೆ ಕಿಂಚಿತ್ತೂ ಬೇಸರವಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು.

ಕನಕನ ಕಿಂಡಿಗೆ ಸ್ವರ್ಣ ಕವಚವನ್ನು ಸೇವೆಯ ರೂಪದಲ್ಲಿ ನೀಡಿದ ಪ್ರಮೋದ್‌ ಮಧ್ವರಾಜ್ ಅವರನ್ನು ಕಾರ್ಯಕ್ರಮದಲ್ಲಿ ಕಡೆಗಣಿಸಿದ್ದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುವುದನ್ನು ಯಾರು ತಪ್ಪಿಸಿದ್ದರೆ ಅಂತಾ ನನಗೆ ಗೊತ್ತಿಲ್ಲ. ಯಾರಾದರೂ ತಪ್ಪಿಸಿದ್ದರೆ ಅದು ಅವರ ರಾಜಕೀಯ ತಪ್ಪು ಹೆಜ್ಜೆ ಎಂದು ಟಾಂಗ್ ನೀಡಿದರು.

ಶ್ರೀ ಪುತ್ತಿಗೆ ಮಠವಾಗಲಿ ಅಥವಾ ಜಿಲ್ಲಾ ಬಿಜೆಪಿ ಆಗಲಿ ನನಗೆ ಕಾರ್ಯಕ್ರಮದಲ್ಲಿ ಪ್ರವೇಶ ನಿರಾಕರಿಸಿದ್ದಕ್ಕೆ ಕಾರಣಕರ್ತರಲ್ಲ. ಯಾರ ಮೇಲೂ ನಾನು ಗೂಬೆ ಕೂರಿಸುವ ಪ್ರಯತ್ನ ಮಾಡುವುದಿಲ್ಲ. ಯಾರನ್ನೂ ಟೀಕೆ ಮಾಡುವುದಿಲ್ಲ. ನನ್ನ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು ಅತ್ಯಂತ ಖುಷಿ ಕೊಟ್ಟಿದೆ. ನನ್ನನ್ನು ಕಡೆಗಣಿಸಿದ್ದಕ್ಕೆ ಯಾರು ಕಾರಣ ಎಂಬುದೂ ನನಗೆ ಗೊತ್ತಿಲ್ಲ ಎಂದರು.

ಇದೇ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಠದವರು ಮತ್ತು ನಾವು ಕಳಿಸಿದ ಪಟ್ಟಿಯಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರು ಇತ್ತು. ಆದರೆ ಪ್ರಧಾನಿ ಕಛೇರಿಯಿಂದ ಪಟ್ಟಿಯನ್ನು ಪರಿಷ್ಕೃತಗೊಳಿಸಿ ಕಳಿಸುವಾಗ ಪ್ರಮೋದ್ ಮಧ್ವರಾಜ್ ಅವರ ಹೆಸರು ಇರಲಿಲ್ಲ. ಜೊತೆಗೆ ಹಲವರ ಹೆಸರು ಇರಲಿಲ್ಲ.ಇದಕ್ಕೆ ಜಿಲ್ಲಾ ಬಿಜೆಪಿ ಯಾವುದೇ ರೀತಿಯಲ್ಲೂ ಕಾರಣ ಅಲ್ಲ. ಅದನ್ನು ಪ್ರಮೋದ್ ಮಧ್ವರಾಜ್ ಅವರೇ ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹಾಲು ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್‌ ಮಧ್ವರಾಜ್ ಬೆರೆತಿದ್ದೇವೆ. ಒಟ್ಟಾರೆ ರೋಡ್ ಶೋ ಮತ್ತು ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ್ ಶೆಟ್ಟಿ, ಶ್ರೀಕಾಂತ್ ನಾಯಕ್, ದಿವಾಕರ ಶೆಟ್ಟಿ, ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

10 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

11 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

11 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

11 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

11 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

14 hours ago