ಉಡುಪಿ: ಶ್ರೀಕೃಷ್ಣ ಮಠ ಪರ್ಯಾಯ ಅದಮಾರು ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಶ್ರೀಕೃಷ್ಣ ಲೀಲೋತ್ಸವದ ಪೂರ್ವ ತಯಾರಿಯ ಮುಹೂರ್ತ ಕೃಷ್ಣಮಠದ ರಥಬೀದಿಯಲ್ಲಿ ಇಂದು ನಡೆಯಿತು.
ಅದಮಾರು ವಿಶ್ವಪ್ರಿಯ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಈಶಪ್ರಿಯ ತೀರ್ಥಶ್ರೀಪಾದರು ನಡೆಸುತ್ತಿರುವ ಶ್ರೀ ಕೃಷ್ಣಪೂಜಾ ಪರ್ಯಾಯದ ಶ್ರೀಕೃಷ್ಣಜನ್ಮಾಷ್ಟಮಿಯ ಶ್ರೀಕೃಷ್ಣ ಲೀಲೋತ್ಸವ ಸೆಪ್ಟೆಂಬರ್ 11ರಂದು ವೈಭವದಿಂದ ನಡೆಯಲಿದೆ.
ಈ ಪ್ರಯುಕ್ತ ರಥಬೀದಿ ಪರಿಸರದಲ್ಲಿ ಉತ್ಸವ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ಗುರ್ಜಿ ನೆಡುವ ಮುಹೂರ್ತ ನೆರವೇರಿತು.
ಕೃಷ್ಣಮಠದ ದಿವಾನರಾದ ಶ್ರೀ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ, ಪಾರುಪತ್ಯಗಾರರಾದ ಶ್ರೀ ಮುದರಂಗಡಿ ಲಕ್ಷ್ಮೀಶ ಭಟ್, ಕೊಠಾರಿಗಳಾದ ಶ್ರೀರಮಣ ಆಚಾರ್ಯ, ವ್ಯವಸ್ಥಾಪಕರಾದ ಗೋವಿಂದರಾಜ್, ಮೇಸ್ತ್ರಿಗಳಾದ ಪದ್ಮನಾಭ ಮೇಸ್ತ್ರಿ, ಪ್ರದೀಪ್ ಕುಮಾರ್ ಮತ್ತು ಮಠದ ಸಿಬ್ಬಂದಿ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…