Featured

ಉಡುಪಿ ಶ್ರೀಕೃಷ್ಣ ಸನ್ನಿಧಿಯ ಸ್ವರ್ಣಾ ನದಿಯಲ್ಲಿ ಪವಿತ್ರ ಸ್ನಾನ, ಹರಿದುಬಂದ ಭಕ್ತಸಾಗರ -Vishwanews24

ಉಡುಪಿ :ಪ್ರಯಾಗ್‌ರಾಜ್‌ನಲ್ಲಿ ಯಶಸ್ವಿಯಾಗಿ ಕುಂಭಮೇಳ ಸಂಪನ್ನಗೊಳ್ಳುತ್ತಲೇ ಉಡುಪಿಯ ಸ್ವರ್ಣೆಯಲ್ಲಿ ನೂರಾರು ಮಂದಿ ಪವಿತ್ರ ತೀರ್ಥ ಸ್ನಾನಗೈದರು.

ಕೃಷ್ಣಾಂಗಾರಕ ಚತುರ್ದಶಿ ಪ್ರಯುಕ್ತ ಸಂಪ್ರದಾಯದಂತೆ ನಡೆದ ನದೀ ಸ್ನಾನದಲ್ಲಿ ಉಡುಪಿ ಮಾತ್ರವಲ್ಲದೇ ರಾಜ್ಯದ ಬೆಂಗಳೂರು ಮೈಸೂರು,  ಮಂಡ್ಯ, ಧಾರವಾಡ, ಹುಬ್ಬಳ್ಳಿ,  ಕಲಬುರ್ಗಿ, ಹಾವೇರಿ ಹಾಗೂ ತಮಿಳಿನಾಡು, ಆಂಧ್ರದ ಚಿತ್ತೂರು ಮೊದಲಾದ‌ ಕಡೆಗಳಿಂದಲೂ ಆಗಮಿಸಿ ಸ್ನಾನಗೈದರು.

ಉಡುಪಿಯಲ್ಲಿ  ಮೊಕ್ಕಾಂ ಇರುವ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಶ್ರೀ ಪಾದರು ತಮ್ಮ ಸುಮಾರು ಮುನ್ನೂರು ಮಂದಿ ಶಿಷ್ಯರೊಂದಿಗೆ ಮುಂಜಾನೆ 5.30 ಕ್ಕೆ ಆಗಮಿಸಿ ತೀರ್ಥಸ್ನಾನಗೈದು ಸ್ವರ್ಣೆಗೆ ಹಾಲೆರೆದು ಬಾಗಿನ ಒಪ್ಪಿಸಿ ಮಂಗಳಾರತಿ ಬೆಳಗಿದರು.

ಬಳಿಕ ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನತೀರ್ಥರು,  ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥರು ಆಗಮಿಸಿ ತೀರ್ಥಸ್ನಾನಗೈದರು. ಶಾಸಕ ಕೆ ರಘುಪತಿ ಭಟ್‌ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕೃಷ್ಣ ಪಕ್ಷ, ಚತುರ್ದಶಿ, ಮಂಗಳವಾರ ಈ ಮೂರು ವಿಶೇಷಗಳು ಕೂಡಿ ಬಂದ ದಿನ ಕೃಷ್ಣಾಂಗಾರಕ ಚತುರ್ದಶಿ ಎಂದೇ ಪ್ರಸಿದ್ಧಿ ಪಡೆದಿದ್ದು, ಸ್ವರ್ಣೆಯಲ್ಲಿ ಗಂಗೆ ಈ ದಿನ ಸನ್ನಿಹಿತಳಾಗಿರುತ್ತಾಳೆ ಅನ್ನೋ ಕಾರಣಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಇಂತಹ ದಿನ ಉಡುಪಿಯ ಜೀವನದಿಯಾದ ಸ್ವರ್ಣಾ ನದಿಯಲ್ಲಿ ಸ್ನಾನ ಮಾಡಿದರೆ ಎಲ್ಲಾ ಪಾಪಗಳು ಕಳೆಯುತ್ತೆ ಅನ್ನೋದು ಪುರಾಣಗಳು ಹೇಳುವ ನಂಬಿಕೆ.

ಕ್ಷೇತ್ರದ ಅರ್ಚಕ ನವೀನ್‌ ಶಿವತ್ತಾಯ, ಉಸ್ತುವಾರಿ ಕೃಷ್ಣಮೂರ್ತಿ ಶಿವತ್ತಾಯ, ವಾಸುದೇವ ಭಟ್‌ ಪೆರಂಪಳ್ಳಿ, ನಾಗರಾಜ್‌ ಶಿವತ್ತಾಯ,  ಉತ್ತರಾದಿ ಮಠದ ವ್ಯವಸ್ಥಾಪಕ ಪ್ರಕಾಶ್‌ ಆಚಾರ್ಯ ಮೊದಲಾದವರು ಸಹಕರಿಸಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago