Featured

ಉಡುಪಿ : ಶ್ರೀ ಕೃಷ್ಣನ ನಗರಿಯಲ್ಲಿ ಕೊರೋನಾ ಸ್ಫೋಟ : ಒಂದೇ ದಿನದಲ್ಲಿ 170 ಪ್ರಕರಣ -Vishwanews24

ಉಡುಪಿ : ಶ್ರೀ ಕೃಷ್ಣನ ನಗರಿಯಲ್ಲಿ ಕೊರೋನಾ ಸ್ಫೋಟ : ಒಂದೇ ದಿನದಲ್ಲಿ 170 ಪ್ರಕರಣ -Vishwanews24

ಮಣಿಪಾಲ ವಿವಿ ಕ್ಯಾಂಪಸ್ ಕೊರೊನಾ ಹಾಟ್‍ಸ್ಪಾಟ್..

ಉಡುಪಿ : ಜಿಲ್ಲೆಯಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 170 ಪ್ರಕರಣಗಳು ಪಾಸಿಟಿವ್ ಎಂದು ದ್ರಢಪಟ್ಟಿದೆ.

ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಇದುವರೆಗೆ 3,95,042 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಭಾನುವಾರ 170 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 24,215 ಕ್ಕೆ ತಲುಪಿದೆ. ಈ ಪೈಕಿ 358 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗ್ತಾನೇ ಸಾಗ್ತಿದೆ. ಮಣಿಪಾಲ ವಿವಿ ಕ್ಯಾಂಪಸ್ ಕೊರೊನಾ ಹಾಟ್‍ಸ್ಪಾಟ್ ಆಗಿ ಪರಿಣಮಿಸಿದೆ.

ಇದನ್ನೂ ಓದಿ : ಆಗುಂಬೆ ಘಾಟಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ಮಾದರಿಯಾದ ಅಧಿಕಾರಿಗಳು -Vishwanews24

ಶ್ರೀ ಕೃಷ್ಣನ ನಗರಿ ಉಡುಪಿಯಲ್ಲಿ ಕೊರೊನಾ ಮಹಾಮಾರಿ ತಾಂಡವವಾಡುತ್ತಿದ್ದು, ಪಾಸಿಟಿವ್ ಕೇಸ್‍ಗಳ ಸಂಖ್ಯೆ ಮೂರಂಕಿಯತ್ತ ಮುನ್ನುಗ್ಗುತ್ತಿದೆ.. ಅದರಲ್ಲೂ ಮಣಿಪಾಲ ವಿವಿಯ ಎಂಐಟಿ ಎಂಜಿನಿಯರಿಂಗ್ ಕ್ಯಾಂಪಸ್‍ನಲ್ಲಿ ಕೇರಳ, ಮಹಾರಾಷ್ಟ್ರದ ಹೆಮ್ಮಾರಿ ಸ್ಫೋಟಗೊಂಡಿದೆ.

ಸದ್ಯ ವಿವಿ ಕ್ಯಾಂಪಸನ್ನ ಜಿಲ್ಲಾಡಳಿತದ ಸೂಚನೆಯಂತೆ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಐಡಿ ಕಾರ್ಡ್ ಇದ್ದವರಿಗೆ ಮಾತ್ರ ಕ್ಯಾಂಪಸ್‍ಗೆ ಎಂಟ್ರಿ ಕೊಡಲಾಗ್ತಿದೆ. 5 ಸಾವಿರ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ದಿನಕ್ಕೆ ಒಂದೂವರೆ ಸಾವಿರದಂತೆ ಒಂದು ವಾರಗಳ ಕಾಲ ಕ್ಯಾಂಪಸ್‍ನಲ್ಲಿ ಕೊರೊನಾ ಟೆಸ್ಟ್ ಗೆ ಮುಂದಾಗಿದೆ. ಆದರೆ ವಿದ್ಯಾರ್ಥಿಗಳು ಟೆಸ್ಟ್ ಮಾಡಿಸಿಕೊಳ್ಳಲು ಹಿಂದೇಟು ಹಾಕ್ತಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ಸೆಮಿ ಲಾಕ್‍ಡೌನ್ ಇಲ್ಲ : ಕೆ. ಸುಧಾಕರ್ -Vishwanews2

ಮತ್ತೊಂದ್ಕಡೆ ಹೊರ ರಾಜ್ಯದಿಂದ ಬರುವವರು, ಸಾರ್ವಜನಿಕ ಸ್ಥಳ, ಸಮಾರಂಭಗಳ ಮೇಲೆ ಜಿಲ್ಲಾಡಳಿತ ಕಣ್ಣಿಟ್ಟಿದೆ. ಮಾಸ್ಕ್ ಸಾಮಾಜಿಕ ಅಂತರ ಸ್ಯಾನಿಟೈಸ್ ಕಡ್ಡಾಯಗೊಳಿಸಲಾಗಿದೆ. ಉಡುಪಿಯಲ್ಲಿ ಕೊರೊನಾ ಎರಡನೇ ಅಲೆ ಮರುಕಳಿಸಲು ಅವಕಾಶ ಕೊಡಬೇಡಿ ಅಂತ ಡಿಹೆಚ್‍ಓ ಡಾ.ಸುಧೀರ್ ಚಂದ್ರಚೂಡ ಮನವಿ ಮಾಡಿಕೊಂಡಿದ್ದಾರೆ.

ಆಸ್ಪತ್ರೆಗಳಿಂದ ಭಾನುವಾರ ಒಟ್ಟು 24 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆ ಸಂಖ್ಯೆ 23,667 ಕ್ಕೆ ತಲುಪಿದೆ. ಕೊರೊನಾ ವೈರಸ್‌ನಿಂದ ಜಿಲ್ಲೆಯಲ್ಲಿ ಇದುವರೆಗೆ 190 ಸಾವುಗಳು ಸಂಭವಿಸಿವೆ.

ಇದನ್ನೂ ಓದಿ : 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಬಿಎಸ್ ವೈ ಮನವಿ- Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

12 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

15 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

15 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

16 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

16 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

16 hours ago