ಉಡುಪಿ :  ಶ್ರೀ ಕೃಷ್ಣಮಠದಿಂದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ” ಆಂಬುಲೆನ್ಸ್ ಕೊಡುಗೆ – Vishwanews24

Featured, ಉಡುಪಿ

ಉಡುಪಿ :  ಶ್ರೀ ಕೃಷ್ಣಮಠದಿಂದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ” ಆಂಬುಲೆನ್ಸ್ ಕೊಡುಗೆ – Vishwanews24

 

ಉಡುಪಿ : ಶ್ರೀಕೃಷ್ಣಮಠದಿಂದ ಸುಮಾರು ಇಪ್ಪತ್ತು ಲಕ್ಷ ರೂಪಾಯಿ ವೆಚ್ಚದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ”ಆಂಬುಲೆನ್ಸ್ ವಾಹನವನ್ನು ಅಷ್ಟಮಠಾಧೀಶರು ಜಿಲ್ಲಾಡಳಿತಕ್ಕೆ ಜಿಲ್ಲಾಧಿಕಾರಿ ಜಗದೀಶ್ ರವರಿಗೆ ಚಾಲನಾ ಕೀ ಯನ್ನು ಹಸ್ತಾಂತರಿಸುವ ಮೂಲಕ ಕೊಡುಗೆಯನ್ನಿತ್ತರು.

ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಶ್ರೀಪಾದರಾದ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಹಾಗೂ ಉಡುಪಿ ಶಾಸಕರಾದ ರಘುಪತಿ ಭಟ್, ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಮಠದ ವ್ಯವಸ್ಥಾಪಕರಾದ ಗೋವಿಂದ್ರಾಜ್ ಮೊದಲಾದವರು ಉಪಸ್ಥಿತರಿದ್ದರು.