Featured

ಉಡುಪಿ ಶ್ರೀ ಕೃಷ್ಣಮಠ ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಒಟ್ಟಿಗೆ ಕಾಣುವ ಸ್ಥಳ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – vishwanews24

ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಉಡುಪಿ: ಶ್ರೀಕೃಷ್ಣನ ಉಪದೇಶಗಳು ಜೀವನದಲ್ಲಿ ಕರ್ಮ, ಧರ್ಮ, ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಸಮತೋಲನಗೊಳಿಸಲು ಮಾರ್ಗದರ್ಶಕವಾಗಿವೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಉಡುಪಿ ಶ್ರೀ ಕೃಷ್ಣಮಠ ಪರ್ಯಾಯ ಶ್ರೀ ಪುತ್ತಿಗೆ ಮಠಗಳ ವತಿಯಿಂದ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶ್ರೀ ಕೃಷ್ಣನ ಉಪದೇಶಗಳನ್ನು ಆಳವಾಗಿ ಅರ್ಥಮಾಡಿಕೊಂಡರೆ, ಧರ್ಮ ಕಾಪಾಡುವುದುರ ಜೊತೆಗೆ ಜೀವನದಲ್ಲಿ ಯಶಸ್ಸುಗಳಿಸುವು ಮಾರ್ಗದತ್ತ ಸಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಉಡುಪಿಯ ಆಧ್ಯಾತ್ಮಿಕ ಪರಂಪರೆಯ ಸಮಾನಾರ್ಥಕ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಿಂದ ಆಯೋಜಿಸಲಾದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದ್ದು ಅದೃಷ್ಟವಾಗಿದೆ.

ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠವು ಅಷ್ಟಮಠಗಳಲ್ಲಿ ಒಂದು ವೈಭವಯುತ ಮಠವಾಗಿದೆ. ಈ ಮಠವು ದ್ವೈತ ವೇದಾಂತದ ಸಂಪ್ರದಾಯವನ್ನು ಉಳಿಸಿಕೊಂಡು ಬರುತ್ತಿದೆ ಮತ್ತು ಆಧುನಿಕ ಜಗತ್ತಿನಲ್ಲಿಯೂ ಅದನ್ನು ಸ್ಥಾಪಿಸುತ್ತಿದೆ. ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಒಟ್ಟಿಗೆ ಕಾಣುವ ಸ್ಥಳ ಇದು.

ಈ ಮಠದ ಮುಖ್ಯಸ್ಥರು ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಅವರು ಜಾಗತಿಕ ವೇದಿಕೆಯಲ್ಲಿ ಮಠದ ಸಂಪ್ರದಾಯಕ್ಕೆ ಪ್ರತಿಷ್ಠೆಯನ್ನು ನೀಡಿದ್ದಾರೆ. ಅವರು ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ವೇದಾಂತ ಮತ್ತು ಸನಾತನ ಧರ್ಮವನ್ನು ಪ್ರಚಾರ ಮಾಡುವ ಮೂಲಕ ಜಗತ್ತನ್ನು ಭಾರತೀಯತೆಯೊಂದಿಗೆ ಸಂಪರ್ಕಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಶ್ಲಾಘಿಸಿದರು.

ಸಾನ್ನಿಧ್ಯ ವಹಿಸಿದ್ದ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಶ್ರೀಕೃಷ್ಣ ಭಕ್ತವತ್ಸಲ, ಭಕ್ತರಾಧೀನ. ಭಕ್ತರಿಗಾಗಿ ದ್ವಾರಕೆಯಿಂದ ಉಡುಪಿಗೆ ಬಂದ ಕೃಷ್ಣನನ್ನು ಆಚಾರ್ಯ ಮಧ್ವರು ಪ್ರತಿಷ್ಠಾಪಿಸಿ, ಭಕ್ತರಿಗೆ ಕೃಷ್ಣ ದರ್ಶನದ ಅವಕಾಶ ಕಲ್ಪಿಸಿದರು. ಶ್ರೀಕೃಷ್ಣನ ತತ್ವಾದರ್ಶಗಳನ್ನು ಭಕ್ತರಿಗೆ ತಿಳಿಸುವ ಆಶಯದಿಂದ 48 ದಿನಗಳ ಪರ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಕಳೆದ ಬಾರಿ ಒಂದು ತಿಂಗಳ ಕಾಲ ಆಚರಿಸಲಾಗಿತ್ತು ಎಂದರು.

ಸಾನ್ನಿಧ್ಯ ವಹಿಸಿದ್ದ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.ಶಾಸಕ ಯಶಪಾಲ್ ಸುವರ್ಣ, ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್. ಎಸ್. ಬಲ್ಲಾಳ್, ಉದ್ಯಮಿಗಳಾದ ರಾಘವೇಂದ್ರ ರಾವ್ ಮತ್ತು ಬಾಳೆಕುದ್ರು ರಾಮಚಂದ್ರ ಉಪಾಧ್ಯಾಯ ಅಭ್ಯಾಗತರಾಗಿದ್ದರು. ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಮೊದಲಾದವರಿದ್ದರುಡಾ. ಗೋಪಾಲಾಚಾರ್ಯ ಮತ್ತು ರಮಣ ಆಚಾರ್ಯ ನಿರೂಪಿಸಿದರು. ರಾಘವೇಂದ್ರ ಆಚಾರ್ಯ ಅವರಿಂದ ಮಂತ್ರಘೋಷ ನಡೆಸಿದರು.

ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪೂಜ್ಯ ವಿಶ್ವಪ್ರಿಯ ತೀರ್ಥ ಸ್ವಾಮಿಜಿ, ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರು, ಶಾಸಕ ಯಶಪಾಲ್ ಸುವರ್ಣ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago