Featured

ಉಡುಪಿ : ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ – vishwanews24

ಉಡುಪಿ : ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ

ಉಡುಪಿ: ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ ಮಾಡಲಾಗುತ್ತಿದೆ. ಈ ಚಿನ್ನದ ಕವಚದ ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು.

ಕನಕನ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಒಂದು ಭಾಗ್ಯ ಅಂತಾನೆ ಹೇಳಬಹುದು, ಅದರಲ್ಲೂ ಚಿನ್ನದ ಹೊದಿಕೆಯಿರುವ ಕನಕ ಕಿಂಡಿಯಿಂದ ಶ್ರೀ ಕೃಷ್ಣನನ್ನು ನೋಡೋದು ಸೌಭಾಗ್ಯವೇ ಸರಿ. ಮಾಜಿ ಸಚಿವ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಸೇವಾ ರೂಪದಲ್ಲಿ ಬಂಗಾರದ ಕವಚವನ್ನು ದೇವಳಕ್ಕೆ ನೀಡುತ್ತಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಶ್ರೀ ಕೃಷ್ಣನ ಸನ್ನಿಧಾನಕ್ಕೆ ಆಗಮಿಸಿ ಶ್ರೀಕೃಷ್ಣನಿಗೆ ಸಮರ್ಪಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ಸ್ವರ್ಣ ಕವಚವನ್ನು ನಿರ್ಮಾಣ ಮಾಡಲಾಗಿದ್ದು, ನೂತನವಾಗಿ ನಿರ್ಮಾಣ ಮಾಡಿದಂತ ಸ್ವರ್ಣ ಕವಚವನ್ನು ಪ್ರಮೋದ್ ಮಧ್ವರಾಜ್ ಅವರು ತಮ್ಮ ಮನೆಗೆ ಮೊದಲು ಬರಮಾಡಿಕೊಂಡು, ತಮ್ಮ ಮನೆಯಲ್ಲಿರುವ ಗೋ ಶಾಲೆಯಲ್ಲಿ ಸ್ವರ್ಣ ಕವಚಕ್ಕೆ ವಿಶೇಷ ಪೂಜೆ ನೆರವೇರಿಸಿ ಆ ಬಳಿಕ ಶ್ರೀ ಕೃಷ್ಣನಿಗೆ ಸಮರ್ಪಿಸಿದರು.

ಕನಕನ ಕಿಂಡಿಗೆ ಬಂಗಾರದ ಕವಚವನ್ನು ಅಳವಡಿಕೆ ಮಾಡಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಅದನ್ನು ಉದ್ಘಾಟನೆ ಮಾಡಲಿದ್ದಾರೆ. ಇನ್ನು ಮುಂದೆ ಭಕ್ತರಿಗೆ ಶ್ರೀ ಕೃಷ್ಣನನ್ನು ಬಂಗಾರದ ಕವಚದ ಮೂಲಕ ದರ್ಶನ ಮಾಡುವ ಅವಕಾಶವಿದೆ. ಇದು ನನ್ನ ತಂದೆಯವರ ಆಸೆಯೂ ಆಗಿತ್ತು ಎಂದು ಸಂತಸದ ನುಡಿಗಳನ್ನಾಡಿದ್ದಾರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago