ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬದಂತೆ ಆಚರಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ಪರ್ಯಾಯ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.
ಜ.17-18 ರಂದು ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವು ನಡೆಯಲಿದ್ದು, ಪರ್ಯಾಯ ಮಹೋತ್ಸವಕ್ಕೆ ಸುಮಾರು 3 ಲಕ್ಷ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು, ನೈರ್ಮಲ್ಯ ಮತ್ತು ಘನ ತ್ಯಾಜ್ಯ ವಸ್ತು ವಿಲೇವಾರಿಯ ಉಸ್ತುವಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ರಥಬೀದಿಯ ಅಕ್ಕಪಕ್ಕದ ಪ್ರದೇಶಗಳಲ್ಲಿಯೂ ಸ್ವಚ್ಛತೆ ಕಾಪಾಡಬೇಕು. ಕೆ.ಎಸ್.ಅರ್.ಟಿ.ಸಿ ಬಸ್ ನಿಲ್ದಾಣ, ಸರ್ವಿಸ್ ಮತ್ತು ಸಿಟಿ ಬಸ್ ನಿಲ್ದಾಣ, ಶ್ರೀ ಕೃಷ್ಣ ಮಠದ ವಾಹನಗಳ ನಿಲುಗಡೆ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳಿದ್ದು, ಸಾರ್ವಜನಿಕರ ಓಡಾಟ ಇರುವ ಇನ್ನು ಕೆಲವು ಸ್ಥಳಗಳಲ್ಲಿ ತಾತ್ಕಾಲಿಕವಾದ ಶೌಚಾಲಯಗಳನ್ನು ನಿರ್ಮಿಸಬೇಕು. ಬೀದಿದೀಪಗಳ ಸರಿಪಡಿಸುವಿಕೆ, ರಸ್ತೆ ದುರಸ್ತಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ನಗರಸಭೆ ಆಯುಕ್ತ ಆನಂದ್ ಕಲ್ಲೋಲ್ಕರ್, ಎಂ.ಬಿ ಪುರಾಣಿಕ್ ಮತ್ತಿತರರು ಉಪಸ್ಥಿತರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…