ಕೊಲ್ಲೂರು: ನವರಾತ್ರಿಗೆ ದಿನಗಣನೆ ಆರಂಭಗೊಂಡಿದೆ.ಇದೇ ತಿಂಗಳ ಏಳರಿಂದ ಹದಿನೈದರ ತನಕ ನವರಾತ್ರಿ ಉತ್ಸವ ನಡೆಯಲಿದೆ. ದಕ್ಷಿಣ ಭಾರತದ ಪ್ರಸಿದ್ಧ ದೇವಿಯ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ಈ ಬಾರಿ ಸರಳವಾಗಿ ನವರಾತ್ರಿ ಉತ್ಸವ ಆಚರಿಸಲಾಗುತ್ತಿದೆ.
ಅಕ್ಟೋಬರ್ 7 ರಿಂದ 15ರವರೆಗೆ ದೇಗುಲದಲ್ಲಿ ನವರಾತ್ರಿ ಉತ್ಸವವನ್ನು ಸರ್ಕಾರದ ಮಾರ್ಗಸೂಚಿಯಂತೆ ನಡೆಸಲು ತೀರ್ಮಾನಿಸಲಾಗಿದೆ. ಕ್ಷೇತ್ರದ ಒಳಗಷ್ಟೇ ಸರಳವಾಗಿ ಈ ಬಾರಿ ಉತ್ಸವ ಆಚರಣೆಗಳು ನಡೆಯಲಿವೆ. ವಿದ್ಯಾರಂಭ, ಅನ್ನಪ್ರಾಶನ ಕಾರ್ಯಕ್ರಮಗಳು ಕೂಡ ಸಂಪ್ರದಾಯಕ್ಕೆ ಸೀಮಿತವಾಗಿ ನಡೆಯಲಿವೆ.
ಅಕ್ಟೋಬರ್ 14ರಂದು ನಡೆಯುವ ನವಮಿ ರಥೋತ್ಸವದಂದು ಕೂಡ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಬಂದನಂತರ ಕಳೆದ ಎರಡು ವರ್ಷಗಳಿಂದ ಇದೇ ಮಾದರಿಯಲ್ಲಿ ಅತ್ಯಂತ ಸರಳವಾಗಿ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಸ್ಯಾಂಡಲ್ವುಡ್ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ವ್ಯತ್ಯಯ, ಆಸ್ಪತ್ರೆಗೆ ದಾಖಲು -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…