Featured

ಉಡುಪಿ : RSS ಸಂಘವನ್ನು ತಿಳಿದುಕೊಳ್ಳದೆ ವಿರೋಧ ಮಾತನಾಡಬಾರದು , ನಾನು ಕೂಡ ಹಿಂದೆ ಆರ್ ಎಸ್ ಎಸ್ ಬಗ್ಗೆ ವಿರೋಧ ಮಾತನಾಡುತ್ತಿದ್ದೆ : ಪ್ರಮೋದ್ ಮಧ್ವರಾಜ್ – Vishwanews24

ನಾನು ಕೂಡ ಹಿಂದೆ ಆರ್ ಎಸ್ ಎಸ್ ಬಗ್ಗೆ ವಿರೋಧ ಮಾತನಾಡುತ್ತಿದ್ದೆ

ಆರ್ ಎಸ್ ಎಸ್  ಒಂದು ದೇಶಭಕ್ತಿ ದೇಶಪ್ರೇಮ ದೇಶ ನಿಷ್ಠೆಯ ಸಂಘಟನೆ

ಕಳೆದ ಐದು ತಿಂಗಳಲ್ಲಿ ಆರ್ ಎಸ್ಎಸ್ ಸಂಘಟನೆಯ ಕೆಲಸವನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ..

ಉಡುಪಿ: ಆರ್ ಎಸ್ ಎಸ್ ಸಂಘಟನೆ ಒಂದು ದೇಶಭಕ್ತಿ ದೇಶಪ್ರೇಮ ದೇಶ ನಿಷ್ಠೆಯ ಸಂಘಟನೆಯಾಗಿದ್ದು, ಕಳೆದ ಐದು ತಿಂಗಳಲ್ಲಿ ಆರ್ ಎಸ್ಎಸ್ ಸಂಘಟನೆಯ ಕೆಲಸವನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ಯರಾಜ್ ಹೇಳಿದ್ದಾರೆ.

ಆರ್ ಎಸ್ ಎಸ್ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪದಲ್ಲಿ ಭಾಗಿಯಾದ ಪ್ರಮೋದ್ ಮಧ್ವರಾಜ್ ಮಾತನಾಡಿದ ಅವರು ದೇಶದ ಕಟ್ಟಕಡೆಯ ಬಡವನ ಬಗ್ಗೆ ಸೇವಾ ರೂಪದಲ್ಲಿ ಆರ್ ಎಸ್ ಎಸ್ ಕೆಲಸ ಮಾಡುತ್ತಿದೆ, ಕಳೆದ ಐದು ತಿಂಗಳಲ್ಲಿ ನಾನು ಇದನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ. ಸಂಘದ ಹೊರಗೆ ಇದ್ದು ಟೀಕೆ ಮಾಡುವುದು ಸುಲಭ. ದೇಶ ಕಟ್ಟುವ ಕೆಲಸ ಸಂಸ್ಕಾರ ಉದ್ದೀಪಿಸುವ ಕೆಲಸ ವನ್ನು ಆರ್ ಎಸ್ ಎಸ್ ಮಾಡುತ್ತಿದೆ.

ಕಟ್ಟ ಕಡೆಯ ವ್ಯಕ್ತಿಯ ಶಿಕ್ಷಣ ಮತ್ತು ಆರೋಗ್ಯಕ್ಕೆ RSS ಸೇವೆ ಸಲ್ಲಿಸುತ್ತಿದ್ದು, ಸಂಘವನ್ನು ತಿಳಿದುಕೊಳ್ಳದೆ ವಿರೋಧ ಮಾತನಾಡಬಾರದು, ನಾನು ಕೂಡ ಹಿಂದೆ ಆರ್ ಎಸ್ ಎಸ್ ಬಗ್ಗೆ ವಿರೋಧ ಮಾತನಾಡುತ್ತಿದ್ದೆ ಆದರೆ ಆರ್ ಎಸ್ ಎಸ್ ಇಡೀ ದೇಶಕ್ಕೆ ಸಂಸ್ಕಾರ ಕೊಡುತ್ತಿದೆ. ಅಜ್ಞಾನದಿಂದ ಸಂಘದ ಬಗ್ಗೆ ಟೀಕೆ ಮಾಡುವ ಒಂದು ವರ್ಗ ಇದೆ, ಆರ್ ಎಸ್ ಎಸ್ ನ ಶಕ್ತಿಯನ್ನು ಸಹಿಸದೆ ಟೀಕೆ ಮಾಡುವವರಿದ್ದಾರೆ. ಆರ್ ಎಸ್ ಎಸ್ ಬಗ್ಗೆ ಹೊಟ್ಟೆಕಿಚ್ಚಿನಿಂದ ಕೆಲವರು ಮಾತನಾಡುತ್ತಾರೆ, ಹೊಟ್ಟೆಕಿಚ್ಚಿನಿಂದ ಮಾತನಾಡುವವರಿಗೆ ಮದ್ದಿಲ್ಲ ಎಂದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago