ಉಡುಪಿ: ಉಡುಪಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತಿದ್ದು ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ಮಾಸ್ಕ್ ಧರಿಸದವರ ವಿರುದ್ದ ಕಟಿಣ ಕ್ರಮ ಕೈಗೊಳ್ಳುತ್ತಿದೆ. ಇಂದು ಉಡುಪಿಯಲ್ಲಿ ಸಂಚಾರ ಪೋಲಿಸರು ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಮೂಡಿಸಿದರು.
ಟ್ರಾಫಿಕ್ ಎಸ್.ಐ ಅಬ್ದುಲ್ ಖಾದರ್ ನೇತೃತ್ವದಲ್ಲಿ ಉಡುಪಿ ಸಂಚಾರ ಠಾಣಾ ಪೋಲಿಸರು ಉಡುಪಿಯ ಕಲ್ಸಂಕ, ಸರ್ವಿಸ್ ಬಸ್ ನಿಲ್ದಾಣದ ಬಳಿ ಮಾಸ್ಕ್ ಧರಿಸದವರ ವಿರುದ್ದ ದಂಡ ಹಾಕುವುದರ ಜೊತೆಗೆ ಸಾರ್ವಜನಿಕರಿಗೆ ಮಾಸ್ಕ್ ಅನ್ನು ವಿತರಿಸಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮಾಡಿದರು.
ಇದನ್ನೂ ಓದಿ :ಕೋವಿಡ್ 2ನೇ ಅಲೆ : ಹೊಸ ಮಾರ್ಗ ಸೂಚಿ ಪ್ರಕಟ, ಮದುವೆಗೆ 200, ರಾಜಕೀಯ ಕಾರ್ಯಕ್ರಮಕ್ಕೆ– 500 ಮಂದಿಗೆ ಅವಕಾಶ -Vishwanews24
ಈ ಸಂಧರ್ಭದಲ್ಲಿ ಹಲವಾರು ಮಂದಿ ಮಾಸ್ಕ್ ಇದ್ದರೂ ಕೂಡ ಮಾಸ್ಕ್ ಧರಿಸದೇ ವಾಹನ ಚಲಾಯಿಸುವುದು ಕಂಡು ಬಂದಿತು.ಬಸ್ಗಳಲ್ಲಿ ಮಾಸ್ಕ್ ಧರಿಸದೇ ಪ್ರಯಾಣ ನಡೆಸಲು ಅವಕಾಶ ನೀಡಿದ ಕಾರಣಕ್ಕಾಗಿ ಬಸ್ ನಿರ್ವಾಹಕನೋರ್ವನಿಗೂ ದಂಡ ವಿದಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಸಂಚಾರ ಠಾಣಾ ಎಸ್ ಐ ಅಬ್ದುಲ್ ಖಾದರ್ “ಉಡುಪಿಯಲ್ಲಿ ಕೊರೊನಾ ಪ್ರಕರಣ ಹೆಚ್ಚುತಿದ್ದು ಇತ್ತೀಚಿಗೆ ಜಿಲ್ಲಾಧಿಕಾರಿಗಳು ಕೂಡಾ ನಗರದಲ್ಲಿ ಮಾಸ್ಕ್ ಧರಿಸದವರ ವಿರುದ್ದ ದಂಡ ವಿಧಿಸಿದ್ದರು. ಈಗಾಗಲೆ ಉಡುಪಿಯಲ್ಲಿ 80 ಶೇಕಡಾ ಜನರು ಮಸ್ಕ್ ಧರಿಸುತಿದ್ದಾರೆ. ಮಾಸ್ಕ್ ಧರಿಸದವರಿಗೆ ದಂಡದ ಜೊತೆಗೆ ಅವರಿಗೆ ಮಾಸ್ಕ್ ಅನ್ನು ವಿತರಿಸುವ ಕೆಲಸವನ್ನು ಕೂಡಾ ನಾವು ಮಾಡುತ್ತಿದ್ದೇವೆ” ಎಂದರು.
ಇದನ್ನೂ ಓದಿ :ಉಡುಪಿ : ಮಾ. 27 ರಂದು ಮೆಘಾ ಲೋಕ್ ಅದಾಲತ್ -Vishwanews24
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…