ಉಡುಪಿ: ಸಂತೆಕಟ್ಟೆಯ ರಾಷ್ಟೀಯ ಹೆದ್ದಾರಿ 66ರ ಅಂಡರ್ ಪಾಸ್ನ ಒಂದು ಬದಿ ರಸ್ತೆ ಡಾಮರು ಕಾಮಗಾರಿ ಪೂರ್ಣ ಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರ-ಉಡುಪಿ ಬದಿಯ ರಸ್ತೆಯಲ್ಲಿ ವಾಹನ ಸಂಚಾರ ಆರಂಭಗೊಂಡಿದೆ.
ಸಂತೆಕಟ್ಟೆ ಜಂಕ್ಷನ್ನಲ್ಲಿನ ಸಂಚಾರ ಸಮಸ್ಯೆಗೆ ಪರಿಹಾರವಾಗಿ 2023ರ ಜನವರಿಯಲ್ಲಿ ಸುಮಾರು 27.4ಕೋಟಿ ರೂ.ವೆಚ್ಚದಲ್ಲಿ ಒಂದು ಕಿ.ಮೀ. ದೂರದ ರಸ್ತೆಯಲ್ಲಿ ಅಂಡರ್ಪಾಸ್ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಆದರೆ ಈ ಕಾಮಗಾರಿಯು ಮಳೆ ಹಾಗೂ ಬಂಡೆ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಯಿಂದ ನಿಗದಿತ ಸಮಯಕ್ಕೆ ಪೂರ್ಣ ಗೊಳ್ಳದೆ ವಿಳಂಬವಾಗಿತ್ತು.
ಈ ಮಧ್ಯೆ ಅಂಡರ್ ಪಾಸ್ನ ಒಂದು ಬದಿಯ ಮಣ್ಣು ಹಾಗೂ ಸರ್ವಿಸ್ ರಸ್ತೆ ಕೂಡ ಕುಸಿದಿದ್ದವು. ಇದರಿಂದ ಸಂತೆಕಟ್ಟೆ ಸಂಚಾರ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡು ಸಾರ್ವ ಜನಿಕರ ಆಕ್ರೋಶಕ್ಕೂ ಕಾರಣವಾಗಿತ್ತು. ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೂಡ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಚುನಾವಣಾ ತರಾತುರಿಯಲ್ಲಿ ಭಾಗಶಃ ಪೂರ್ಣ ಗೊಂಡಿರುವ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಕಾಮಗಾರಿ ಪೂರ್ಣಗೊಂಡ ಅಂಡರ್ ಪಾಸ್ನ 60ಮೀಟರ್ ಅಗಲದ ರಸ್ತೆಯ ಒಂದು ಬದಿಯಲ್ಲಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಸಂಚಾರ ಆರಂಭಿಸಿವೆ. ಇತ್ತ ಅಂಡರ್ಪಾಸ್ನಲ್ಲಿ ವಾಹನ ಸಂಚಾರ ಆರಂಭವಾಗುತ್ತಿದ್ದಂತೆ ಇನ್ನೊಂದು ಬದಿಯ ಅಂಡರ್ಪಾಸ್ ಕಾಮಗಾರಿಗಾಗಿ ರಸ್ತೆ ಅಗೆಯುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.
ಅದೇ ರೀತಿ ಹೂಡೆ, ನೇಜಾರು ಕಡೆಗಳಿಂದ ಬರುವ ವಾಹನಗಳು ಸಂತೆಕಟ್ಟೆ ಜಂಕ್ಷನ್ನಲ್ಲಿ ಕುಂದಾಪುರ ಕಡೆ ತೆರಳಿ ಸುಮಾರು 200-300ಮೀಟರ್ ದೂರ ಸಾಗಿ ಅಂಡರ್ ಪಾಸ್ ಮೂಲಕ ಉಡುಪಿ ಕಡೆ ತೆರಳುತ್ತಿವೆ. ಉಡುಪಿ ಕಡೆಯಿಂದ ಕುಂದಾಪುರ ಕಡೆ ತೆರಳುವ ವಾಹನಗಳು ಸಂತೆಕಟ್ಟೆ ಯಲ್ಲಿ ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದೆ ಎಂದು ಉಡುಪಿ ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…