ಉಡುಪಿ: ಸಂತೆಕಟ್ಟೆಯ ರಾಷ್ಟೀಯ ಹೆದ್ದಾರಿ 66ರ ಅಂಡರ್ ಪಾಸ್ನ ಒಂದು ಬದಿ ರಸ್ತೆ ಡಾಮರು ಕಾಮಗಾರಿ ಪೂರ್ಣ ಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರ-ಉಡುಪಿ ಬದಿಯ ರಸ್ತೆಯಲ್ಲಿ ವಾಹನ ಸಂಚಾರ ಆರಂಭಗೊಂಡಿದೆ.
ಸಂತೆಕಟ್ಟೆ ಜಂಕ್ಷನ್ನಲ್ಲಿನ ಸಂಚಾರ ಸಮಸ್ಯೆಗೆ ಪರಿಹಾರವಾಗಿ 2023ರ ಜನವರಿಯಲ್ಲಿ ಸುಮಾರು 27.4ಕೋಟಿ ರೂ.ವೆಚ್ಚದಲ್ಲಿ ಒಂದು ಕಿ.ಮೀ. ದೂರದ ರಸ್ತೆಯಲ್ಲಿ ಅಂಡರ್ಪಾಸ್ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಆದರೆ ಈ ಕಾಮಗಾರಿಯು ಮಳೆ ಹಾಗೂ ಬಂಡೆ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಯಿಂದ ನಿಗದಿತ ಸಮಯಕ್ಕೆ ಪೂರ್ಣ ಗೊಳ್ಳದೆ ವಿಳಂಬವಾಗಿತ್ತು.
ಈ ಮಧ್ಯೆ ಅಂಡರ್ ಪಾಸ್ನ ಒಂದು ಬದಿಯ ಮಣ್ಣು ಹಾಗೂ ಸರ್ವಿಸ್ ರಸ್ತೆ ಕೂಡ ಕುಸಿದಿದ್ದವು. ಇದರಿಂದ ಸಂತೆಕಟ್ಟೆ ಸಂಚಾರ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡು ಸಾರ್ವ ಜನಿಕರ ಆಕ್ರೋಶಕ್ಕೂ ಕಾರಣವಾಗಿತ್ತು. ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೂಡ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಚುನಾವಣಾ ತರಾತುರಿಯಲ್ಲಿ ಭಾಗಶಃ ಪೂರ್ಣ ಗೊಂಡಿರುವ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಕಾಮಗಾರಿ ಪೂರ್ಣಗೊಂಡ ಅಂಡರ್ ಪಾಸ್ನ 60ಮೀಟರ್ ಅಗಲದ ರಸ್ತೆಯ ಒಂದು ಬದಿಯಲ್ಲಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಸಂಚಾರ ಆರಂಭಿಸಿವೆ. ಇತ್ತ ಅಂಡರ್ಪಾಸ್ನಲ್ಲಿ ವಾಹನ ಸಂಚಾರ ಆರಂಭವಾಗುತ್ತಿದ್ದಂತೆ ಇನ್ನೊಂದು ಬದಿಯ ಅಂಡರ್ಪಾಸ್ ಕಾಮಗಾರಿಗಾಗಿ ರಸ್ತೆ ಅಗೆಯುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.
ಅದೇ ರೀತಿ ಹೂಡೆ, ನೇಜಾರು ಕಡೆಗಳಿಂದ ಬರುವ ವಾಹನಗಳು ಸಂತೆಕಟ್ಟೆ ಜಂಕ್ಷನ್ನಲ್ಲಿ ಕುಂದಾಪುರ ಕಡೆ ತೆರಳಿ ಸುಮಾರು 200-300ಮೀಟರ್ ದೂರ ಸಾಗಿ ಅಂಡರ್ ಪಾಸ್ ಮೂಲಕ ಉಡುಪಿ ಕಡೆ ತೆರಳುತ್ತಿವೆ. ಉಡುಪಿ ಕಡೆಯಿಂದ ಕುಂದಾಪುರ ಕಡೆ ತೆರಳುವ ವಾಹನಗಳು ಸಂತೆಕಟ್ಟೆ ಯಲ್ಲಿ ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದೆ ಎಂದು ಉಡುಪಿ ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…