Featured

ಉಡುಪಿ : ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದಲ್ಲಿ ಶೋಭಾ ಕರಂದ್ಲಾಜೆ ನೇರ ಹೊಣೆ : ರಮೇಶ್ ಕಾಂಚನ್ – Vishwanews24

ಉಡುಪಿ : ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದಲ್ಲಿ ಶೋಭಾ ಕರಂದ್ಲಾಜೆ ನೇರ ಹೊಣೆ : ರಮೇಶ್ ಕಾಂಚನ್

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಹೆದ್ದಾರಿ ಕುಸಿದು ಏನಾದರೂ ಅಪಾಯ ಸಂಭವಿಸಿದ್ದಲ್ಲಿ ಅದರ ನೈತಿಕ ಹೊಣೆಯನ್ನು ಹೊರಲು ಕೇಂದ್ರ ಸಚಿವೆ ಹಾಗೂ ಉಡುಪಿ – ಚಿಕ್ಕಮಗಳೂರು ಸಂಸದರಾದ ಕುಮಾರಿ ಶೋಭಾ ಕರಂದ್ಲಾಜೆಯವರು ಸಿದ್ದರಿದ್ದಾರೆಯೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ.

ಅವೈಜ್ಞಾನಿಕವಾಗಿ ಯಾವುದೇ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಆಳವಾದ ಗುಂಡಿಯನ್ನು ತೋಡಿದ್ದು ಸೂಕ್ತವಾದ ಮುನ್ನೆಚ್ಚರಿಕಾ ಕ್ರಮವನ್ನು ಕೂಡ ಕೈಗೊಂಡಿಲ್ಲ. ಒಂದು ವೇಳೆ ಗುಂಡಿಯ ಪಕ್ಕದಲ್ಲೇ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮಳೆಗೆ ಕುಸಿದು ಹೋದಲ್ಲಿ ಜೀವ ಹಾನಿಯ ಜೊತೆಗೆ ಸಂಪರ್ಕ ಕೂಡ ಕಡಿದುಕೊಳ್ಳುವ ಭೀತಿ ಇದೆ. ರಸ್ತೆ ನಿರ್ಮಾಣದ ಸಮಯದಲ್ಲೇ ಸೂಕ್ತ ಅಂಡರ್ ಪಾಸ್ ನಿರ್ಮಿಸದೆ ಈಗ ಇದನ್ನು ನಿರ್ಮಿಸಲಿಕ್ಕಾಗಿ ಆಳವಾದ ಗುಂಡಿ ಮಾಡಿರುವುದು ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯತಕ್ಕೆ ತೋರಿದ ಕೈಗನ್ನಡಿಯಾಗಿದೆ.

ಈ ನಡುವೆ ಸಂಸದರು ಇತ್ತೀಚಿನ ಸಭೆಯಲ್ಲಿ ಗುಂಡಿಯನ್ನು ತಾತ್ಕಾಲಿಕವಾಗಿ ಮಣ್ಣು ಹಾಕಿ ಮುಚ್ಚಲು ಸೂಚಿಸಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಈಗಾಗಲೇ ಅಲ್ಲಿನ ಲೋಡುಗಟ್ಟಲೇ ಮಣ್ಣತನ್ನು ಲಕ್ಷಾಂತರ ರೂಪಾಯಿಗಳಿಗೆ ಇವರದೇ ಪಕ್ಷದ ನಾಯಕರು ಮಾರಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಜನಸಾಮಾನ್ಯರು ನೋಡಿದ್ದಾರೆ. ಅಲ್ಲದೆ ಈಗಾಗಲೇ ಅಷ್ಟೋಂದು ಆಳವಾಗಿ ತೋಡಿರುವ ಗುಂಡಿಯನ್ನು ಮುಚ್ಚಲು ಸಾಧ್ಯವೇ ಎನ್ನುವ ಕನಿಷ್ಠ ಜ್ಞಾನ ಸಂಸದರಿಗೆ ಇಲ್ಲವೇ? ಮೂರು ನಾಲ್ಕು ತಿಂಗಳಿಗೊಮ್ಮೆ ಅತಿಥಿ ಕಲಾವಿದರಾಗಿ ಜಿಲ್ಲೆಗೆ ಆಗಮಿಸುವ ಸಂಸದರು ಜಿಲ್ಲೆಯ ಸಮಸ್ಯೆಯ ಬಗ್ಗೆ ಅರಿತುಕೊಳ್ಳುವ ಪ್ರಯತ್ನ ಕೂಡ ಮಾಡದಿರುವುದು ಜಿಲ್ಲೆಯ ಜನರ ದುರಂತವಾಗಿದೆ.

ಸಮಯಕ್ಕೆ ಸರಿಯಾಗಿ ಕೆಲಸ ಮಾಡಲು ವಿಫಲವಾದ ಹೆದ್ದಾರಿ ಇಲಾಖೆ ತಮ್ಮದೇ ಕೇಂದ್ರ ಸರಕಾರದ ಅಧೀನದಲ್ಲಿದ್ದು ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲು ಕೂಡ ಸಂಸದರಿಗೆ ಸಾಧ್ಯವಾಗದಿರುವುದು ಇವರ ದುರ್ಬಲತೆಯನ್ನು ತೋರಿಸುತ್ತದೆ. ಈ ಬಾರಿಯ ಮಳೆಗಾಲದಲ್ಲಿ ಸಂತೆಕಟ್ಟೆ ಪರಿಸರದ ಜನರು ಸೇರಿದಂತೆ ಜಿಲ್ಲೆಯ ಜನರು ಅಂಡರ್ ಪಾಸ್ ಗುಂಡಿಯಿಂದ ಸಮಸ್ಯೆಗೆ ಒಳಗಾಗುವುದು ಖಂಡಿತವಾಗಿದ್ದು ಈ ಬಗ್ಗೆ ಸಂಸದೆಯವರು ಸೂಕ್ತ ಕ್ರಮಕೈಗೊಳ್ಳದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಸಾರ್ವಜನಿಕರೊಂದಿಗೆ ಸೇರಿ ಹೋರಾಟ ಮಾಡಬೇಕಾದೀತು ಎಂದು ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

44 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

50 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago