ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಕಂಡುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಈ ಕೇಸ್ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಅವರು 40 ಪರ್ಸೆಂಟ್ ಆರೋಪ ಮಾಡಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ನಲ್ಲಿ ಶವ ಪತ್ತೆ ಆಗಿದೆ. ಈಗಾಗಲೇ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ರೀತಿಯ ತನಿಖೆ ಆಗುತ್ತದೆ. ಇದರ ಪ್ರಾಥಮಿಕ ವರದಿ ಏನು ಬರುತ್ತದೆ ಎನ್ನುವುದರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈ ಸಾವಿನ ಹಿನ್ನೆಲೆ ಸಂಪೂರ್ಣವಾಗಿ ತನಿಖೆ ನಡೆಯುತ್ತದೆ ಎಂದು ಹೇಳಿದರು.
ಪೊಲೀಸ್ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಹೇಳಿದ್ದೇವೆ. ಸಂತೋಷ್ ಸಾವಿನ ಕುರಿತು ಕಾನೂನು ಬದ್ಧವಾಗಿ ಆಗಬೇಕು. ಪಾರದರ್ಶಕ ತನಿಖೆ ಆಗುತ್ತದೆ. ಗುತ್ತಿಗೆದಾರ ಸಂತೋಷ್ ಮಾಡಿದ್ದ ಆರೋಪವನ್ನು ಈಶ್ವರಪ್ಪ ಅವರು ಅಲ್ಲಗಳೆದಿದ್ದಾರೆ. ಅಷ್ಟೇ ಅಲ್ಲದೇ ಕೋಟ್ನಲ್ಲಿ ಕೇಸ್ ಹಾಕಿದ್ದಾರೆ. ಸಂತೋಷ್ಗೆ ನೋಟಿಸ್ ಹೋಗಿದೆ. ಇದೆಲ್ಲವನ್ನು ತನಿಖೆ ಸಂದರ್ಭದಲ್ಲಿ ಒಳಪಡುತ್ತದೆ. ಯಾವ ಸಂದರ್ಭದಲ್ಲಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ ಎಂದು ಮಾಹಿತಿ ನೀಡಿದರು.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…