Featured

ಉಡುಪಿ : ಸಂಪೂರ್ಣ ಲಾಕ್‌ಡೌನ್‌ ಯಶಸ್ವಿ, ಪಾಸಿಟಿವಿಟಿ ದರ ಶೇ.10ಕ್ಕೆ ಇಳಿಕೆ :  ಜಿಲ್ಲಾಧಿಕಾರಿ – Vishwanews24

ಉಡುಪಿ : ಸಂಪೂರ್ಣ ಲಾಕ್‌ಡೌನ್‌ ಯಶಸ್ವಿ, ಪಾಸಿಟಿವಿಟಿ ದರ ಶೇ.10ಕ್ಕೆ ಇಳಿಕೆ :  ಜಿಲ್ಲಾಧಿಕಾರಿ – Vishwanews24

ಉಡುಪಿ: ಜಿಲ್ಲೆಯಲ್ಲಿನ 40 ಗ್ರಾ.ಪಂ.ಗಳ ಸಂಪೂರ್ಣ ಲಾಕ್‌ಡೌನ್‌ ಕೊರೊನಾ ಹತೋಟಿಗೆ ತರುವಲ್ಲಿ ಅದ್ಭುತವಾಗಿ ಕೆಲಸ ಮಾಡಿದೆ. ಕೋವಿಡ್‌ ಪಾಸಿಟಿವಿಟಿ ಪ್ರಮಾಣ ಶೇ.10ಕ್ಕಿಂತ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಪಾಸಿಟಿವ್‌ ಬಂದ್‌ ಮನೆಗಳನ್ನು ಸೀಲ್‌ಡೌನ್‌ ಮಾಡಲಾಗುತ್ತಿದೆ. ಇದರಿಂದ ಜನರು ಪಾಸಿಟಿವ್‌ ಬಂದವರಿಂದ ದೂರ ಉಳಿಯಲು ಸಾಧ್ಯವಾಗುತ್ತಿದೆ. ನಿತ್ಯ 3ರಿಂದ 4 ಸಾವಿರ ಜನರ ಗಂಟಲ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. 50ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳಿರುವ 16 ಗ್ರಾ.ಪಂ.ಗಳಲ್ಲಿ ಜೂ.9ರಿಂದ ಜೂ.13ರ ವರೆಗೆ ಸಂಪೂರ್ಣ ಲಾಕ್‌ಡೌನ್‌ ವಿಧಿಸಲಾಗುತ್ತದೆ ಎಂದು ಹೇಳಿದರು.

ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಗ್ರಾ.ಪಂ. ಹಾಗೂ ವಾರ್ಡ್‌ಗಳ ಅವಲೋಕನ ಮಾಡಲಾಗಿದೆ. ಪ್ರತಿ ಪಂಚಾಯಿತಿಗೆ ಅಧಿಕಾರಿಗಳು ಭೇಟಿ ನೀಡಿ ಕೊರೊನಾ ನಿರ್ವಹಣೆಯ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.

ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಆಸ್ಪತ್ರೆಯ ಬೆಡ್‌ಗಾಗಿ ಕರೆ ಬರುವುದು ಕಡಿಮೆಯಾಗಿದೆ. 1,200 ಆಮ್ಲಜನಕ ಬೆಡ್‌ನ‌ಲ್ಲಿ ಕೇವಲ 300 ಬೆಡ್‌ ಬಳಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್‌ ಉತ್ಪಾದನೆಯತ್ತ ಗಮನ ಹರಿಸಲಾಗುತ್ತಿದೆ ಎಂದರು.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

38 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago