ಉಡುಪಿ

ಉಡುಪಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ : ಪ್ರಜಾಪ್ರಭುತ್ವದ ಕಗ್ಗೊಲೆ  – ದೇಶದ ಜನರು ಇದಕ್ಕೆಲ್ಲಾ ಸೂಕ್ತವಾದ ಉತ್ತರ ನೀಡುತ್ತಾರೆ:  ವೆರೋನಿಕಾ ಕರ್ನೆಲಿಯೊ – Vishwanews24

ಉಡುಪಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿಯ ಅನರ್ಹ : ಪ್ರಜಾಪ್ರಭುತ್ವದ ಕಗ್ಗೊಲೆ  – ದೇಶದ ಜನರು ಇದಕ್ಕೆಲ್ಲಾ ಸೂಕ್ತವಾದ ಉತ್ತರವನ್ನು ನೀಡುತ್ತಾರೆ:  ವೆರೋನಿಕಾ ಕರ್ನೆಲಿಯೊ

ಉಡುಪಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಅಭಿಪ್ರಾಯಪಟ್ಟಿದ್ದಾರೆ.

ಮೋದಿಯವರನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಒರ್ವ ಜನರಿಂದ ಆಯ್ಕೆಗೊಂಡ ಸಂಸದರನ್ನು ಅಮಾನತುಗೊಳೀಸುತ್ತಾರೆ ಎಂದರೆ ಈ ಹಿಂದೆ ಹಲವು ಬಾರಿ ಹಲವು ಬಿಜೆಪಿ ಪಕ್ಷದ ನಾಯಕರು ಕೂಡ ಟೀಕಿಸಿದ ಅನೇಕ ಉದಾಹರಣೆಗಳಿವೆ. ಅವರೆಲ್ಲರನ್ನು ಹೀಗಿಯೇ ಅಮಾನತು ಮಾಡುತ್ತಾ ಹೋದರೆ ಮುಂದೊಂದು ದಿನ ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಇವರ ಪಕ್ಷದವರು ಸಂಪೂರ್ಣ ಖಾಲಿಯಾಗಬೇಕಾಗಿತ್ತು.

ನರೇಂದ್ರ ಮೋದಿಯವರು ದೇಶದ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ವಾಕ್ ಸ್ವಾತಂತ್ರ್ಯ ಎಂಬ ಪದ ಸಂಪೂರ್ಣವಾಗಿ ಅರ್ಥ ಕಳೆದುಕೊಂಡಿದೆ. ನರೇಂದ್ರ ಮೋದಿ ಹಾಗೂ ಬಿಜೆಪಿಯ ಜನವಿರೋಧಿ ನೀತಿಗಳನ್ನು ಸಂಸತ್ತಿನ ಒಳಗೆ ಮತ್ತು ಹೊರಗೆ ಪರಿಣಾಮಕಾರಿಯಾಗಿ ಪ್ರತಿಭಟಿಸುತ್ತಿದ್ದಾರೆ ಎಂಬ ಒಂದೇ ಕಾರಣಕ್ಕೆ ನ್ಯಾಯಾಲಯದ ತೀರ್ಪು ಬಂದ ಒಂದೇ ದಿನದಲ್ಲಿ ಮೇಲಿನ ನ್ಯಾಯಾಲಯಕ್ಕೆ ಮನವಿ ಮಾಡಲೂ ಕೂಡ ಅವಕಾಶ ನೀಡದೆ ರಾಹುಲ್ ಅವರನ್ನು ಅಮಾನತು ಮಾಡಿರುವ ಸರಕಾರದ ಕ್ರಮ ಖಂಡನೀಯ. ಅಭಿವೃದ್ಧಿಯ ವಿಚಾರ ಬಿಟ್ಟು, ದ್ವೇಷ ರಾಜಕಾರಣ ಮಾಡುವುದರಲ್ಲಿ ಬಿಜೆಪಿ ಪಕ್ಷ ಎಷ್ಟೊಂದು ವೇಗವಾಗಿದೆ ಎನ್ನುವುದು ಇದರಿಂದ ತಿಳಿಯುತ್ತದೆ.

ರಾಹುಲ್ ಗಾಂಧಿಯವರು ಅದಾನಿ ವಿಷಯ ಎತ್ತಿದಾಗಿನಿಂದ ಮೋದಿಯವರ ಸರಕಾರವು ಅವರ ಮೇಲೆ ದ್ವೇಷ ಸಾಧಿಸುತ್ತಿದೆ. ಮೋದಿ ಸರಕಾರದ ದ್ವೇಷದ ರಾಜಕಾರಣದ ಇನ್ನೊಂದು ಉದಾಹರಣೆ ಇದು. ಕಾಂಗ್ರೆಸ್ ಪಕ್ಷ ಇದಕ್ಕೆಲ್ಲ ತಲೆ ಬಾಗುವುದಿಲ್ಲ, ಬದಲಾಗಿ ಬಿಜೆಪಿಯ ದ್ವೇಷ ರಾಜಕಾರಣದ ವಿರುದ್ದ ಎಲ್ಲಾ ಬಗೆಯ ಪ್ರತಿ ಹೋರಾಟ ನಡೆಸುತ್ತದೆ. ದೇಶದ ಜನರೂ ಕೂಡ ಇವರ ಜನವೀರೋಧಿ ನೀತಿಗಳನ್ನು ಹಾಗೂ ದ್ವೇಷ ರಾಜಕೀಯವನ್ನು ಗಮನಿಸುತ್ತಿದ್ದು ಇದಕ್ಕೆಲ್ಲಾ ಸೂಕ್ತವಾದ ಉತ್ತರವನ್ನು ನೀಡುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago