Featured

ಉಡುಪಿ : ಸಖಿ ಕೇಂದ್ರದ ನೆರವು ದೊರೆಯುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಸಖಿ ಕೇಂದ್ರದ ನೆರವು ದೊರೆಯುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದೊರೆಯುವ ನೆರವು ಮತ್ತು ಸೌಲಭ್ಯಗಳ ಕುರಿತಂತೆ, ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ನೊಂದ ಮಹಿಳೆಯರಿಗೆ ಸಕಾಲದಲ್ಲಿ ಅಗತ್ಯ ನೆರವು ದೊರಕುವಂತೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದಾಖಲಾಗುವ ದೂರುಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸಮಾಲೋಚನೆ ಹಂತದಲ್ಲಿರುವ ಪ್ರಕರಣಗಳನ್ನು ಬೇಗ ಮುಕ್ತಾಯಗೊಳಿಸಿ, ನ್ಯಾಯಾಲಯದಲ್ಲಿರುವ ಪ್ರಕರಣಗಳ ಕುರಿತು ಆಗಾಗ್ಗೆ ವಿಚಾರಿಸಿ, ಕೇಂದ್ರದಲ್ಲಿ ದಾಖಲಾಗುವ ಮಹಿಳೆಯರಿಗೆ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಗೆ ದೂರವಾಣಿ ಕರೆ ಮಾಡುವ ಮೂಲಕ ಶುಶ್ರೂಷಕರ ಸೇವೆಯನ್ನು ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ರಾಷ್ಟಿçÃಯ ಹೆದ್ದಾರಿಯಿಂದ ಬರಲು ಅನುಕೂಲವಾಗುವಂತೆ ಕೇಂದ್ರಕ್ಕೆ ಕಾಂಕ್ರೀಟ್ ಅಥವಾ ಇಂಟರ್‌ಲಾಕ್ ರಸ್ತೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಖಿ ಕೇಂದ್ರದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರನ್ನು ಮಾತ್ರ ದಾಖಲು ಮಾಡುವ ಅವಕಾಶವಿದ್ದು, ಇತರೆ ಮಾನಸಿಕ ಸಮಸ್ಯೆಯಿಂದ ರಸ್ತೆ ಬದಿ ಅಲೆದಾಡುವ ಮಹಿಳೆಯರನ್ನು ದಾಖಲು ಮಾಡಲು ಪ್ರತ್ಯೇಕ ಕೇಂದ್ರ ಇಲ್ಲವಾಗಿದ್ದು, ಈ ಕುರಿತು ಜಿಲ್ಲೆಯಲ್ಲಿ ಪ್ರತ್ಯೇಕ ಕೇಂದ್ರ ತೆರೆಯುವ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯುವಂತೆ ತಿಳಿಸಿದ ರಾಷ್ಟಿçÃಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್, ಸಖಿ ಕೇಂದ್ರದ ಕುರಿತಂತೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಅರಿವು ಮೂಡಿಸಿ ಎಂದರು.

ಸಖಿ ಕೇಂದ್ರದಲ್ಲಿ ಫೆಬ್ರವರಿ 2021 ರಿಂದ ಜೂನ್ ವರೆಗೆ 42 ಕೌಟುಂಬಿಕ ದೌರ್ಜನ್ಯ, 1 ಸೈಬರ್ ಅಪರಾಧ, 2 ಕಾಣೆಯಾದ ಪ್ರಕರಣ ಹಾಗೂ ಇತರೆ 33 ಸೇರಿದಂತೆ ಒಟ್ಟು 78 ಪ್ರಕರಣಗಳು ದಾಖಲಾಗಿದ್ದು, 27 ಪ್ರಕರಣ ಇತ್ಯರ್ಥಗೊಂಡಿದ್ದು, ಉಳಿದ ಪ್ರಕರಣಗಳು ನ್ಯಾಯಾಲಯದಲ್ಲಿ ಮತ್ತು ಸಮಾಲೋಚನೆಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರಚಂದ್ರ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

54 minutes ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 hour ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

21 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

23 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

23 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

24 hours ago