ಉಡುಪಿ : ಸಚಿವ ಕೋಟ ಬೆಂಗಾವಲು ವಾಹನ ಅಪಘಾತ : ಡಿವೈಡರ್ ಗೆ ಡಿಕ್ಕಿ ಹೊಡೆದು ಎಸ್ಕಾರ್ಟ್ ವಾಹನ ಪಲ್ಟಿ – VIshwanews24
ಉಡುಪಿ:ಸಚಿವ ಕೋಟ ಬೆಂಗಾವಲು ವಾಹನ ಅಪಘಾತ : ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಎಸ್ಕಾರ್ಟ್ ವಾಹನ ಪಲ್ಟಿ
ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಎಸ್ಕಾರ್ಟ್ ವಾಹನ ಅಪಘಾತಕ್ಕಿಡಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯಲ್ಲಿ ನಡೆದಿದೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನಲ್ಲಿ ಮುಖ್ಯಮಂತ್ರಿಯವರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಸೂಚನೇ ನೀಡದೇ ಪಥ ಬದಲಿಸಿದ ವೇಳೆ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ.
ವಾಹನದಲ್ಲಿನ ಎಸ್ಕಾರ್ಟ್ ಆಫೀಸರ್ ಗಣೇಶ್ ಆಳ್ವ ಗೆ ಚಿಕ್ಕಪುಟ್ಟ ತರಚಿದ ಗಾಯಗಳಾಗಿದ್ದು ಸಚಿವರು ತಮ್ಮ ವಾಹನದಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
