ಉಡುಪಿ: ಕರಾವಳಿ ಜಿಲ್ಲೆಗಳ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗಿ ಕೇಂದ್ರ ಸರಕಾರದ ಮೂಲಕ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಮಲ್ಪೆ ಮೀನುಗಾರ ಸಂಘದ ಸಭಾಭವನದಲ್ಲಿ ಮಲ್ಪೆಯ ಮೀನುಗಾರ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳನ್ನು ಭೇಟಿ ನೀಡಿ ಮತಯಾಚನೆ ಮಾಡಿ ಗೆಲುವಿಗೆ ಸಹಕಾರ ಕೋರಿದರು.
ಕರಾವಳಿ ಭಾಗದ ಮೀನುಗಾರರು ನಿರಂತರವಾಗಿ ರಾಷ್ಟ್ರೀಯತೆ, ಹಿಂದುತ್ವ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಸದಾ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದು, ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸತತ 3ನೇ ಬಾರಿಗೆ ಪ್ರಧಾನಿಯಾಗಿಸುವ ಸಂಕಲ್ಪ ಮಾಡಿದ್ದಾರೆ. ಈ ಹಿಂದೆ ಮೀನುಗಾರಿಕೆ ಸಚಿವನಾಗಿದ್ದಾಗ 60 ಕೋಟಿ ರೂ. ವೆಚ್ಚದಲ್ಲಿ 22 ಸಾವಿರ ಮಹಿಳಾ ಮೀನುಗಾರರ ಸಾಲ ಮನ್ನಾ, ಹಲವು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮೀನುಗಾರಿಕೆ ಬಂದರು ಅಭಿವೃದ್ಧಿಗೆ 180 ಕೋಟಿ ರೂ. ಮಂಜೂರು ಹಾಗೂ ವಿವಿಧ ಮೀನುಗಾರಿಕೆ ಬಂದರುಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಹಾಗೂ ಮೀನುಗಾರ ಸಂಘಟನೆಗಳ ಪದಾಧಿಕಾರಿಗಳು, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…