ಉಡುಪಿ : ನಗರಾಡಳಿತ ಚುನಾವಣೆ ಫಲಿತಾಂಶ ಬಿಜೆಪಿ ಪರವಾಗಿದ್ದು, ಇಡೀ ರಾಜ್ಯದಲ್ಲಿ ಬಿಜೆಪಿಯ ವಾತಾವರಣ ಉತ್ತಮ ಆಗುತ್ತಿದೆ. ಸಮಸ್ಯೆ ಬಗೆಹರಿಸುವ ಶಕ್ತಿ ಬಿಜೆಪಿಗೆ ಇದೆ ಎಂದು ಜನ ಮತ ಹಾಕಿದ್ದಾರೆ ಹಾಗಾಗಿ ನಾವು ಉತ್ತಮ ಆಡಳಿತ ಕೊಡಲು ಯೋಜನೆಗಳನ್ನು ಹಾಕಿಕೊಳ್ಳುತ್ತೇವೆ ಎಂದು ಸಮಾಜ ಕಲ್ಯಾಣ ಹಿಂದುಳಿದ ವರ್ಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಡಿದ ಅವರು, “ಎಲ್ಲಾ ಮತದಾರರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಅತಂತ್ರ ಇರುವಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಯಾಕೆ ಸೈಲೆಂಟ್ ಆಗಿದ್ದರೆ ಗೊತ್ತಿಲ್ಲ. ಜೆಡಿಎಸ್ ಸ್ಪರ್ಧೆ ಮಾಡದಿರುವಲ್ಲಿ ನಮ್ಮ ಸ್ಥಾನಗಳು ಹೆಚ್ಚಾಗಿದೆ” ಎಂದರು.
ಇನ್ನು ಕಾಂಗ್ರೆಸ್ನ ಅಪಪ್ರಚಾರ ರಾಜ್ಯದ ಜನಕ್ಕೆ ಅರ್ಥ ಆಗಿದ್ದು, ಅವರ ಪ್ರಚಾರ ಮತ್ತು ಅಪಪ್ರಚಾರದಲ್ಲಿ ತಿರುಳಿಲ್ಲ. ಜನ ಮೋದಿಯ ಕಾರ್ಯಶೈಲಿಗೆ ಮತ ಹಾಕಿದ್ದಾರೆ. ಸಿಎಂ ಬೊಮ್ಮಾಯಿ ಮತ್ತು ಸಂಘಟನಾತ್ಮಕ ಚಟುವಟಿಕೆಯನ್ನು ಜನ ಗೆಲ್ಲಿಸಿದ್ದಾರೆ. ಜನಪರವಾಗಿರುವ ಬಿಜೆಪಿಯವರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ” ಎಂದಿದ್ದಾರೆ.
ಗಣೇಶೋತ್ಸವದ ಕುರಿತು ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ಕೊರೊನಾ ಗೈಡ್ ಲೈನ್ ಪಾಲಿಸುತ್ತಾ ಗಣೇಶೋತ್ಸವ ಆಚರಣೆಯಾಗಬೇಕು. ಜನ ರಾಜ್ಯಸರ್ಕಾರದ ನಿಯಮವನ್ನು ಒಪ್ಪಿದ್ದಾರೆ. ಸಣ್ಣಪುಟ್ಟ ಲೋಪದೋಷ ಇದ್ರೆ ಸರಿ ಮಾಡಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…