Featured

ಉಡುಪಿ: ‘ಸಮಸ್ಯೆ ಬಗೆಹರಿಸುವ ಶಕ್ತಿ ಬಿಜೆಪಿಗಿದೆ ಎಂದು ಜನ ಮತ ಹಾಕಿದ್ದಾರೆ’ : ಸಚಿವ ಕೋಟ -Vishwanews24

ಉಡುಪಿ: ‘ಸಮಸ್ಯೆ ಬಗೆಹರಿಸುವ ಶಕ್ತಿ ಬಿಜೆಪಿಗಿದೆ ಎಂದು ಜನ ಮತ ಹಾಕಿದ್ದಾರೆ’ : ಸಚಿವ ಕೋಟ -Vishwanews24

ಉಡುಪಿ : ನಗರಾಡಳಿತ ಚುನಾವಣೆ ಫಲಿತಾಂಶ ಬಿಜೆಪಿ ಪರವಾಗಿದ್ದು, ಇಡೀ ರಾಜ್ಯದಲ್ಲಿ ಬಿಜೆಪಿಯ ವಾತಾವರಣ ಉತ್ತಮ ಆಗುತ್ತಿದೆ. ಸಮಸ್ಯೆ ಬಗೆಹರಿಸುವ ಶಕ್ತಿ ಬಿಜೆಪಿಗೆ ಇದೆ ಎಂದು ಜನ ಮತ ಹಾಕಿದ್ದಾರೆ ಹಾಗಾಗಿ ನಾವು ಉತ್ತಮ ಆಡಳಿತ ಕೊಡಲು ಯೋಜನೆಗಳನ್ನು ಹಾಕಿಕೊಳ್ಳುತ್ತೇವೆ ಎಂದು ಸಮಾಜ ಕಲ್ಯಾಣ ಹಿಂದುಳಿದ ವರ್ಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಡಿದ ಅವರು, “ಎಲ್ಲಾ ಮತದಾರರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಅತಂತ್ರ ಇರುವಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಯಾಕೆ ಸೈಲೆಂಟ್ ಆಗಿದ್ದರೆ ಗೊತ್ತಿಲ್ಲ. ಜೆಡಿಎಸ್ ಸ್ಪರ್ಧೆ ಮಾಡದಿರುವಲ್ಲಿ ನಮ್ಮ ಸ್ಥಾನಗಳು ಹೆಚ್ಚಾಗಿದೆ” ಎಂದರು.

ಇನ್ನು ಕಾಂಗ್ರೆಸ್‌ನ ಅಪಪ್ರಚಾರ ರಾಜ್ಯದ ಜನಕ್ಕೆ ಅರ್ಥ ಆಗಿದ್ದು, ಅವರ ಪ್ರಚಾರ ಮತ್ತು ಅಪಪ್ರಚಾರದಲ್ಲಿ ತಿರುಳಿಲ್ಲ. ಜನ ಮೋದಿಯ ಕಾರ್ಯಶೈಲಿಗೆ ಮತ ಹಾಕಿದ್ದಾರೆ. ಸಿಎಂ ಬೊಮ್ಮಾಯಿ ಮತ್ತು ಸಂಘಟನಾತ್ಮಕ ಚಟುವಟಿಕೆಯನ್ನು ಜನ ಗೆಲ್ಲಿಸಿದ್ದಾರೆ. ಜನಪರವಾಗಿರುವ ಬಿಜೆಪಿಯವರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ” ಎಂದಿದ್ದಾರೆ.

ಗಣೇಶೋತ್ಸವದ ಕುರಿತು ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ಕೊರೊನಾ ಗೈಡ್ ಲೈನ್ ಪಾಲಿಸುತ್ತಾ ಗಣೇಶೋತ್ಸವ ಆಚರಣೆಯಾಗಬೇಕು. ಜನ ರಾಜ್ಯಸರ್ಕಾರದ ನಿಯಮವನ್ನು ಒಪ್ಪಿದ್ದಾರೆ. ಸಣ್ಣಪುಟ್ಟ ಲೋಪದೋಷ ಇದ್ರೆ ಸರಿ ಮಾಡಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago