ಉಡುಪಿ : ನಗರಾಡಳಿತ ಚುನಾವಣೆ ಫಲಿತಾಂಶ ಬಿಜೆಪಿ ಪರವಾಗಿದ್ದು, ಇಡೀ ರಾಜ್ಯದಲ್ಲಿ ಬಿಜೆಪಿಯ ವಾತಾವರಣ ಉತ್ತಮ ಆಗುತ್ತಿದೆ. ಸಮಸ್ಯೆ ಬಗೆಹರಿಸುವ ಶಕ್ತಿ ಬಿಜೆಪಿಗೆ ಇದೆ ಎಂದು ಜನ ಮತ ಹಾಕಿದ್ದಾರೆ ಹಾಗಾಗಿ ನಾವು ಉತ್ತಮ ಆಡಳಿತ ಕೊಡಲು ಯೋಜನೆಗಳನ್ನು ಹಾಕಿಕೊಳ್ಳುತ್ತೇವೆ ಎಂದು ಸಮಾಜ ಕಲ್ಯಾಣ ಹಿಂದುಳಿದ ವರ್ಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಡಿದ ಅವರು, “ಎಲ್ಲಾ ಮತದಾರರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಅತಂತ್ರ ಇರುವಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಯಾಕೆ ಸೈಲೆಂಟ್ ಆಗಿದ್ದರೆ ಗೊತ್ತಿಲ್ಲ. ಜೆಡಿಎಸ್ ಸ್ಪರ್ಧೆ ಮಾಡದಿರುವಲ್ಲಿ ನಮ್ಮ ಸ್ಥಾನಗಳು ಹೆಚ್ಚಾಗಿದೆ” ಎಂದರು.
ಇನ್ನು ಕಾಂಗ್ರೆಸ್ನ ಅಪಪ್ರಚಾರ ರಾಜ್ಯದ ಜನಕ್ಕೆ ಅರ್ಥ ಆಗಿದ್ದು, ಅವರ ಪ್ರಚಾರ ಮತ್ತು ಅಪಪ್ರಚಾರದಲ್ಲಿ ತಿರುಳಿಲ್ಲ. ಜನ ಮೋದಿಯ ಕಾರ್ಯಶೈಲಿಗೆ ಮತ ಹಾಕಿದ್ದಾರೆ. ಸಿಎಂ ಬೊಮ್ಮಾಯಿ ಮತ್ತು ಸಂಘಟನಾತ್ಮಕ ಚಟುವಟಿಕೆಯನ್ನು ಜನ ಗೆಲ್ಲಿಸಿದ್ದಾರೆ. ಜನಪರವಾಗಿರುವ ಬಿಜೆಪಿಯವರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ” ಎಂದಿದ್ದಾರೆ.
ಗಣೇಶೋತ್ಸವದ ಕುರಿತು ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ಕೊರೊನಾ ಗೈಡ್ ಲೈನ್ ಪಾಲಿಸುತ್ತಾ ಗಣೇಶೋತ್ಸವ ಆಚರಣೆಯಾಗಬೇಕು. ಜನ ರಾಜ್ಯಸರ್ಕಾರದ ನಿಯಮವನ್ನು ಒಪ್ಪಿದ್ದಾರೆ. ಸಣ್ಣಪುಟ್ಟ ಲೋಪದೋಷ ಇದ್ರೆ ಸರಿ ಮಾಡಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…