ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳು ಅ.29ರಂದು ಬೆಳಗ್ಗೆ 10ಗಂಟೆಗೆ ಇಂದ್ರಾಳಿ ಸೇತುವೆ ಬಳಿ ಸಾರ್ವಜನಿಕ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿವೆ ಎಂದು ಸಮಿತಿ ಪ್ರಮುಖ ಅಮೃತ್ ಶೆಣೈ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇತುವೆ ಕಾಮಗಾರಿಯನ್ನು ಬಹುತೇಕ ಸ್ಥಗಿತ ಗೊಂಡು ಹಲವು ವರ್ಷಗಳು ಸಂದಿವೆ. ಇದರಿಂದ ಇಲ್ಲಿ ಅಪಘಾತಗಳಾಗಿ ಅಪಾರ ಸಾವು ನೋವು ಸಂಭವಿಸುತ್ತಿದೆ. ಅಲ್ಲದೆ ದಿನಗಟ್ಟಲೆ ಟ್ರಾಫಿಕ್ ಜಾಮ್ಗೂ ಕಾರಣವಾಗುತ್ತಿದೆ. ಇಲ್ಲಿರುವ ಶಾಲಾ ಕಾಲೇಜು, ವಿದ್ಯಾರ್ಥಿಗಳ ಜೀವಕ್ಕೂ ಅಪಾಯಕರ ಪರಿಸ್ಥಿತಿ ಉಂಟಾಗಿದೆ. ಪಾದಾಚಾರಿಗಳಿಗೂ ಮತ್ತು ಧಾರ್ಮಿಕ ಕೇಂದ್ರಗಳಿಗೆ ಬರುವ ಭಕ್ತಾದಿಗಳಿಗೂ, ಬೇರೆ ಬೇರೆ ಜಿಲ್ಲೆ ಗಳಿಂದ ಮಣಿಪಾಲ ಆಸ್ಪತ್ರೆಗೆ ಬರುವ ರೋಗಿಗಳಿಗೂ ಬಹಳ ತೊಂದರೆ ಆಗುತ್ತಿದೆ. ಒಟ್ಟಾರೆ ಈ ಕಾಮಗಾರಿ ವಿಳಂಬ ದಿಂದ ಉಡುಪಿಯ ಆರ್ಥಿಕತೆಗೆ ಪರೋಕ್ಷವಾಗಿ ಹೊಡೆತವಾಗಿದೆ ಎಂದು ಆರೋಪಿಸಿದರು.
ಈ ಪ್ರತಿಭಟನೆಯ ಮೂಲಕ ಜನಜಾಗೃತಿ ಮೂಡಿಸುವುದಲ್ಲದೆ ಸರಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯ ಮಾಡಲಾಗು ವುದು. ಮುಂದಿನ ಮೂರು ತಿಂಗಳಲ್ಲಿ ಅಂದರೆ ಜ.29ರೊಳಗೆ ಈ ಕಾಮಗಾರಿಯನ್ನು ಮುಗಿಸಿ ಚತುಷ್ಪಥ ರಸ್ತೆಯನ್ನು ಸಂಚಾರಕ್ಕೆ ಮುಕ್ತ ಮಾಡಬೇಕು. ಇಲ್ಲದಿದ್ದರೆ ಜ.30ರಂದು ಉಗ್ರ ಹೋರಾಟ ನಡೆಸಲಾಗುವುದು. ಈ ಕುರಿತ ಮನವಿ ಯನ್ನು ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಜ್ಯೋತಿ ಹೆಬ್ಬಾರ್, ಅಬ್ದುಲ್ ಅಝೀಝ್ ಉದ್ಯಾವರ, ಬಿ.ಕುಶಲ ಶೆಟ್ಟಿ, ಅನ್ಸಾರ್ ಅಹ್ಮದ್, ಲತಾ ಆನಂದ ಶೇರಿಗಾರ್, ರಮೇಶ್ ಕಾಂಚನ್, ಚಂದ್ರ ಮೋಹನ್, ಸುರೇಶ್ ಶೆಟ್ಟಿ ಬನ್ನಂಜೆ, ಜಾನಕಿ ಕೃಷ್ಣ ನಾಯ್ಕ, ರಮೇಶ್ ತಿಂಗಳಾಯ, ಗಣೇಶ್ ನೆರ್ಗಿ, ಮಹಾಬಲ ಕುಂದರ್, ಬಿ.ಶ್ರೀಧರ್, ಕೀರ್ತಿ ಶೆಟ್ಟಿ ಅಂಬಲಪಾಡಿ, ಪೀರು ಮುಹಮ್ಮದ್, ಜಯನ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…