ಉಡುಪಿ: ಈ ವರ್ಷದ ಮೀನುಗಾರಿಕೆ ಋತು ಈಗಾಗಲೇ ಪ್ರಾರಂಭಗೊಂಡಿದೆ.ಆಗಸ್ಟ್ ಒಂದಕ್ಕೆ ಅಧಿಕೃತವಾಗಿ ಮೀನುಗಾರಿಕೆ ಪ್ರಾರಂಭಗೊಂಡಿದ್ದರೂ ಕೂಡ ಕೆಲವು ಕಾರಣಗಳಿಂದ ತಡವಾಗಿ ಮೀನುಗಾರಿಕೆ ಶುರುವಾಗಿದೆ.ಆಗಸ್ಟ್ 15ರ ನಂತರ ಮೀನುಗಾರಿಕೆ ವೇಗ ಪಡೆದುಕೊಂಡಿದ್ದು ಇದೀಗ ಮೀನು ಪ್ರಿಯರಿಗೆ ಸಾಕಷ್ಟು ಮೀನುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಮೀನುಗಾರರು ಸಮುದ್ರ ರಾಜನಿಗೆ ವಿಶೇಷ ಪೂಜೆ ಸಲ್ಲಿಸಿ ಸಮುದ್ರ ಮೀನುಗಾರಿಕೆಗಾಗಿ ಪ್ರಾರ್ಥನೆ ನಡೆಸಿದರು. ಸಮುದ್ರ ರಾಜನಿಗೆ ಸಿಯಾಳ ಅಭಿಷೇಕ ಮಾಡಿದರು.
ಕೈಪುಂಜಾಲು ಮೊಗವೀರ ಮಹಾಸಭಾದ ಮೀನುಗಾರರು ಸಮುದ್ರ ಪೂಜೆಯನ್ನು ಆಯೋಜಿಸಿದ್ದರು.ಕೈಪುಂಜಾಲು ಮೊಗವೀರ ಗ್ರಾಮಸಭೆಯ ಸದಸ್ಯರು ಹಾಲು ಹಾಗೂ ಸಿಯಾಳವನ್ನು ಊರಿನ ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ಸಂಗ್ರಹಿಸಿ ಶ್ರೀ ಪಾಂಡುರಂಗ ರುಕ್ಷ್ಮಿಣಿದೇವರಿಗೆ ಪ್ರಾರ್ಥನೆ ಸಲ್ಲಿಸಿ ಭಜನಾ ಸಂಕೀರ್ತನೆಯೊಂದಿಗೆ ಸಮುದ್ರಕ್ಕೆ ತೆರಳಿದರು. ಬಳಿಕ ಹೇರಳ ಮತ್ಸ ಸಂಪತ್ತನ್ನು ಕರುಣಿಸುವಂತೆ ಪ್ರಾರ್ಥಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…