ಉಡುಪಿ: ಈ ವರ್ಷದ ಮೀನುಗಾರಿಕೆ ಋತು ಈಗಾಗಲೇ ಪ್ರಾರಂಭಗೊಂಡಿದೆ.ಆಗಸ್ಟ್ ಒಂದಕ್ಕೆ ಅಧಿಕೃತವಾಗಿ ಮೀನುಗಾರಿಕೆ ಪ್ರಾರಂಭಗೊಂಡಿದ್ದರೂ ಕೂಡ ಕೆಲವು ಕಾರಣಗಳಿಂದ ತಡವಾಗಿ ಮೀನುಗಾರಿಕೆ ಶುರುವಾಗಿದೆ.ಆಗಸ್ಟ್ 15ರ ನಂತರ ಮೀನುಗಾರಿಕೆ ವೇಗ ಪಡೆದುಕೊಂಡಿದ್ದು ಇದೀಗ ಮೀನು ಪ್ರಿಯರಿಗೆ ಸಾಕಷ್ಟು ಮೀನುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಮೀನುಗಾರರು ಸಮುದ್ರ ರಾಜನಿಗೆ ವಿಶೇಷ ಪೂಜೆ ಸಲ್ಲಿಸಿ ಸಮುದ್ರ ಮೀನುಗಾರಿಕೆಗಾಗಿ ಪ್ರಾರ್ಥನೆ ನಡೆಸಿದರು. ಸಮುದ್ರ ರಾಜನಿಗೆ ಸಿಯಾಳ ಅಭಿಷೇಕ ಮಾಡಿದರು.
ಕೈಪುಂಜಾಲು ಮೊಗವೀರ ಮಹಾಸಭಾದ ಮೀನುಗಾರರು ಸಮುದ್ರ ಪೂಜೆಯನ್ನು ಆಯೋಜಿಸಿದ್ದರು.ಕೈಪುಂಜಾಲು ಮೊಗವೀರ ಗ್ರಾಮಸಭೆಯ ಸದಸ್ಯರು ಹಾಲು ಹಾಗೂ ಸಿಯಾಳವನ್ನು ಊರಿನ ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ಸಂಗ್ರಹಿಸಿ ಶ್ರೀ ಪಾಂಡುರಂಗ ರುಕ್ಷ್ಮಿಣಿದೇವರಿಗೆ ಪ್ರಾರ್ಥನೆ ಸಲ್ಲಿಸಿ ಭಜನಾ ಸಂಕೀರ್ತನೆಯೊಂದಿಗೆ ಸಮುದ್ರಕ್ಕೆ ತೆರಳಿದರು. ಬಳಿಕ ಹೇರಳ ಮತ್ಸ ಸಂಪತ್ತನ್ನು ಕರುಣಿಸುವಂತೆ ಪ್ರಾರ್ಥಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…