ಉಡುಪಿ : ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಹಸಿವನ್ನು ನೀಗಿಸುತ್ತಿದ್ದು, ಎಂದಿನಂತೆ ಯಥಾವತ್ತಾಗಿ ಮುಂದುವರಿಯಲಿದೆ. ಈ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಅಜ್ಜರನಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾಪ ಸರಕಾರದ ಮುಂದೆ ಇಲ್ಲ. ಸರಕಾರ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ ಎಂದು ಹೇಳಿದರು.
ಕಳೆದ ವಿಧಾನ ಸಭೆ ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಜಾರಿಗೆ ತರಲಾಗಿದೆ. ಐದು ಗ್ಯಾರಂಟಿಗಳು ಮುಂದುವರಿಯಲಿವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರೂ ಅನ್ಯತಾ ವ್ಯಾಖ್ಯಾನಿಸಬಾರದು. ಪರಿಷ್ಕರಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿಯವರು ಮಾತನಾಡಿರಲಿಕ್ಕಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಎಲ್ಲರ ಧ್ವನಿಯೂ ಒಂದೇ, ಗ್ಯಾರಂಟಿ ಯೋಜನೆ ಮುಂದುವರಿಯಬೇಕು ಅಂತ. ಚುನಾವಣೆಗಾಗಿ ಸ್ವಾರ್ಥದ ರಾಜಕಾರಣಕ್ಕೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…