Featured

ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ;  ಬಗೆಹರಿಯದ ಸ್ಕಾರ್ಫ್ ವಿವಾದ – ಹಿಜಾಬ್ ಧರಿಸುವ ಹಕ್ಕಿದೆ ಎಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರು – Vishwanews24

ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ;  ಬಗೆಹರಿಯದ ಸ್ಕಾರ್ಫ್ ವಿವಾದ – ಹಿಜಾಬ್ ಧರಿಸುವ ಹಕ್ಕಿದೆ ಎಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರು – Vishwanews24

ಉಡುಪಿ,: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿನ ಸ್ಕಾರ್ಫ್ ವಿವಾದ ಕಳೆದ ಮೂರು ವಾರಗಳಿಂದಲೂ ಬಗೆಹರಿದಿಲ್ಲ.ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ತಮ್ಮ ಬೇಡಿಕೆ ಸಡಿಲಗೊಳಿಸದೆ , ಹಿಜಾಬ್ ಧರಿಸುವ ಹಕ್ಕಿದೆ ಎಂದು ಪಟ್ಟು ಹಿಡಿದಿದ್ದಾರೆ.

ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ಇಲ್ಲದ ಹಿನ್ನಲೆ ಕಾಲೇಜಿನ ಮುಂಭಾಗದಲ್ಲಿ ಸ್ಕಾರ್ಫ್ ವಿವಾದದ ಕುರಿತು ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ ವಿದ್ಯಾರ್ಥಿನಿ ಆಲಿಯಾ ಅಸಾದಿ, “ನಮಗೆ ಶಿಕ್ಷಣವು ಬೇಕು, ನಮ್ಮ ಹಿಜಾಬ್ ಕೂಡ ಬೇಕು. ಪ್ರಥಮ ವರ್ಷ ಹಿಜಾಬ್ ಹಾಕಲು ಪೋಷಕರು ಬಂದು ಮಾತನಾಡಿದ್ದರು. ಆದರೆ ಅನುಮತಿ ನೀಡಿಲ್ಲ. ನಮ್ಮ ಸಮವಸ್ತ್ರದ ಶಾಲಿನಿಂದಲೇ ಸ್ಕಾರ್ಫ್ ಹಾಕಲು ತಯಾರಿದ್ದೇವೆ. ಅದಕ್ಕೂ ಒಪ್ಪಿಗೆ ನೀಡಿಲ್ಲ. ನಂತರ ಲಾಕ್ ಡೌನ್ ಆಯಿತು, ದ್ವಿತೀಯ ವರ್ಷ ಭೌತಿಕ ತರಗತಿ ಆರಂಭ ಆದಾಗ ಮತ್ತೆ ಈ ಗೊಂದಲ ಆರಂಭ ಆಗಿದೆ. ಮೂರು ವಾರಗಳು ಇದೇ ರೀತಿ ಕಳೆದು ಹೋಯ್ತು. ಒಟ್ಟಾರೆಯಾಗಿ ನ್ಯಾಯ ಒದಗಿಸಬೇಕು. ನಾವು ತರಗತಿ ಹಾಜರಾಗಲು ಅನುವು ಮಾಡಿಕೊಡಬೇಕು ” ಎಂದು ಆಗ್ರಹಿಸಿದ್ದಾರೆ.

“ಹಿಜಾಬ್ ಹಾಕುವುದು ನಮ್ಮ ಸಂಪ್ರದಾಯ,ಮೊದಲಿನಿಂದಲೂ ಹಿಜಾಬ್ ಧರಿಸಿದರೆ ಕಾಲೇಜು ಆಡಳಿತದಿಂದಲೇ ದೌರ್ಜನ್ಯ ನಡೆಸಲಾಗುತ್ತಿದೆ. ಇದೇ ವಿಚಾರವಾಗಿ ಹಲವು ದಿನಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.ವಾರದಲ್ಲಿ ನಾಲ್ಕೈದು ಬಾರಿ ಪೋಷಕರ ಸಭೆ ಕರೆಯುತ್ತಾರೆ. ಎಲ್ಲರೂ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ತರಗತಿ ಗೈರು ಹಾಜರಾಗಿದ್ದಕ್ಕೆ ಅನಾರೋಗ್ಯದ ಬಗ್ಗೆ ಕಾರಣ ಹಾಕಿ ಪತ್ರ ಬರೆಸಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದು ವಿದ್ಯಾರ್ಥಿನಿ ಆಲಿಯಾ ಬಾನು ಆರೋಪಿಸಿದ್ದಾರೆ.

ಇದೇ ವೇಳೆ ಐವರು ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವ ಹಕ್ಕಿನ ಬಗ್ಗೆ ಕಾಲೇಜು ಗೇಟ್‌ ಮುಂದೆ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

5 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

5 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

5 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

7 hours ago