Featured

ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ;  ಬಗೆಹರಿಯದ ಸ್ಕಾರ್ಫ್ ವಿವಾದ – ಹಿಜಾಬ್ ಧರಿಸುವ ಹಕ್ಕಿದೆ ಎಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರು – Vishwanews24

ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ;  ಬಗೆಹರಿಯದ ಸ್ಕಾರ್ಫ್ ವಿವಾದ – ಹಿಜಾಬ್ ಧರಿಸುವ ಹಕ್ಕಿದೆ ಎಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರು – Vishwanews24

ಉಡುಪಿ,: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿನ ಸ್ಕಾರ್ಫ್ ವಿವಾದ ಕಳೆದ ಮೂರು ವಾರಗಳಿಂದಲೂ ಬಗೆಹರಿದಿಲ್ಲ.ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ತಮ್ಮ ಬೇಡಿಕೆ ಸಡಿಲಗೊಳಿಸದೆ , ಹಿಜಾಬ್ ಧರಿಸುವ ಹಕ್ಕಿದೆ ಎಂದು ಪಟ್ಟು ಹಿಡಿದಿದ್ದಾರೆ.

ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ಇಲ್ಲದ ಹಿನ್ನಲೆ ಕಾಲೇಜಿನ ಮುಂಭಾಗದಲ್ಲಿ ಸ್ಕಾರ್ಫ್ ವಿವಾದದ ಕುರಿತು ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ ವಿದ್ಯಾರ್ಥಿನಿ ಆಲಿಯಾ ಅಸಾದಿ, “ನಮಗೆ ಶಿಕ್ಷಣವು ಬೇಕು, ನಮ್ಮ ಹಿಜಾಬ್ ಕೂಡ ಬೇಕು. ಪ್ರಥಮ ವರ್ಷ ಹಿಜಾಬ್ ಹಾಕಲು ಪೋಷಕರು ಬಂದು ಮಾತನಾಡಿದ್ದರು. ಆದರೆ ಅನುಮತಿ ನೀಡಿಲ್ಲ. ನಮ್ಮ ಸಮವಸ್ತ್ರದ ಶಾಲಿನಿಂದಲೇ ಸ್ಕಾರ್ಫ್ ಹಾಕಲು ತಯಾರಿದ್ದೇವೆ. ಅದಕ್ಕೂ ಒಪ್ಪಿಗೆ ನೀಡಿಲ್ಲ. ನಂತರ ಲಾಕ್ ಡೌನ್ ಆಯಿತು, ದ್ವಿತೀಯ ವರ್ಷ ಭೌತಿಕ ತರಗತಿ ಆರಂಭ ಆದಾಗ ಮತ್ತೆ ಈ ಗೊಂದಲ ಆರಂಭ ಆಗಿದೆ. ಮೂರು ವಾರಗಳು ಇದೇ ರೀತಿ ಕಳೆದು ಹೋಯ್ತು. ಒಟ್ಟಾರೆಯಾಗಿ ನ್ಯಾಯ ಒದಗಿಸಬೇಕು. ನಾವು ತರಗತಿ ಹಾಜರಾಗಲು ಅನುವು ಮಾಡಿಕೊಡಬೇಕು ” ಎಂದು ಆಗ್ರಹಿಸಿದ್ದಾರೆ.

“ಹಿಜಾಬ್ ಹಾಕುವುದು ನಮ್ಮ ಸಂಪ್ರದಾಯ,ಮೊದಲಿನಿಂದಲೂ ಹಿಜಾಬ್ ಧರಿಸಿದರೆ ಕಾಲೇಜು ಆಡಳಿತದಿಂದಲೇ ದೌರ್ಜನ್ಯ ನಡೆಸಲಾಗುತ್ತಿದೆ. ಇದೇ ವಿಚಾರವಾಗಿ ಹಲವು ದಿನಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.ವಾರದಲ್ಲಿ ನಾಲ್ಕೈದು ಬಾರಿ ಪೋಷಕರ ಸಭೆ ಕರೆಯುತ್ತಾರೆ. ಎಲ್ಲರೂ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ತರಗತಿ ಗೈರು ಹಾಜರಾಗಿದ್ದಕ್ಕೆ ಅನಾರೋಗ್ಯದ ಬಗ್ಗೆ ಕಾರಣ ಹಾಕಿ ಪತ್ರ ಬರೆಸಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದು ವಿದ್ಯಾರ್ಥಿನಿ ಆಲಿಯಾ ಬಾನು ಆರೋಪಿಸಿದ್ದಾರೆ.

ಇದೇ ವೇಳೆ ಐವರು ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವ ಹಕ್ಕಿನ ಬಗ್ಗೆ ಕಾಲೇಜು ಗೇಟ್‌ ಮುಂದೆ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

30 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

35 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago