Featured

ಉಡುಪಿ : ಸರಕಾರಿ ಸೇವಾ ಸೌಲಭ್ಯತೆಗಳನ್ನು ಗೌರವಿಸಿ: ದಿನೇಶ್ ಹೆಗ್ಡೆ ಅತ್ರಾಡಿ -Vishwanews24

ಉಡುಪಿ : ಸರಕಾರಿ ಸೇವಾ ಸೌಲಭ್ಯತೆಗಳನ್ನು ಗೌರವಿಸಿ: ದಿನೇಶ್ ಹೆಗ್ಡೆ ಅತ್ರಾಡಿ -Vishwanews24

ಉಡುಪಿ:ದೇಶಕ್ಕೆ ಕೋವಿಡ್ 19 ಸೋಂಕಿನ ಹಾವಳಿಯ ನಂತರ ಈ ಎರಡೂ ಅಲೆಗಳ ಅವಧಿಯಲ್ಲಿ ಕೇಂದ್ರ ಹಾಗು ರಾಜ್ಯ ಸರಕಾರ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಸಮರೋಪಾದಿಯಲ್ಲಿ ಯೋಜನೆಗಳನ್ನು ರೂಪಿಸಿ ಕಾರ್ಯಪ್ರವೃತ್ತವಾಗಿವೆ ಮತ್ತು ಈ ಸಂದರ್ಭದಲ್ಲಿ ಆದ್ಯತೆಯ ಮೇರೆಗೆ ಸಾಕಷ್ಟು ಸೌಲಭ್ಯತೆಗಳನ್ನು ಉಚಿತವಾಗಿ ಘೋಷಣೆ ಮಾಡಿ ಮಂಜೂರು ಮಾಡಿವೆ. ಅರೋಗ್ಯ ಇಲಾಖೆಯಲ್ಲೂ ಸಾಕಷ್ಟು ಸುಧಾರಣೆಗಳನ್ನು ತಂದಿದ್ದು ಇಂದು ಸರಕಾರಿ ಅರೋಗ್ಯ ಸೇವೆಯ ಗುಣಮಟ್ಟ ಖಾಸಗಿ ಸಂಸ್ಥೆಗಳಿಗೆ ಸ್ಪರ್ಧೆ ನೀಡುವಷ್ಟು ಸುಧಾರಣೆ ಕಂಡಿದೆ. ಆದರೆ ನಿಸ್ವಾರ್ಥದಿಂದ ಮತ್ತು ಅಪಾಯಕಾರಿ ವಾತಾವರಣದಲ್ಲಿ ಮಂಚೂಣಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸುತ್ತಿರುವ ಸರಕಾರಿ ವೈದ್ಯರುಗಳು, ಅರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ಸಾರ್ವಜನಿಕ ಟೀಕಾ ಪ್ರಹಾರಗಳ ಸವಾಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕ ವಲಯ ಸರಕಾರಿ ಸೌಲಭ್ಯತೆಗಳ ಮತ್ತು ಸರಕಾರಿ ನೌಕರರ ಸೇವೆಯನ್ನು ಗುರುತಿಸಿ ಗೌರವಿಸ ಬೇಕು ಎಂದು ಪರ್ಕಳ ಗ್ರಾಹಕರ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಿನೇಶ್ ಹೆಗ್ಡೆ ಅತ್ರಾಡಿ ಅಭಿಮತ ವ್ಯಕ್ತ ಪಡಿಸಿದರು.

ಅವರು ಶುಕ್ರವಾರ ಪರ್ಕಳದ ಹಿರೇಬೆಟ್ಟು ಪ್ರಾಥಮಿಕ ಅರೋಗ್ಯ ಕೇಂದ್ರದ ಉಪಕೇಂದ್ರದಲ್ಲಿ, ಕೋವಿಡ್ ನಿಯಂತ್ರಣಾ ಪಡೆಯ ಸಭೆಯ ಶುಕ್ರವಾರ ಕೇಂದ್ರಕ್ಕೆ ತಮ್ಮ ಸಂಘದಿಂದ ಔಷಧಿಗಳನ್ನು ವಿತರಿಸಿ ಮಾತನಾಡಿದರು.

ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳಾದ ಗೋಪಾಲ್ ಆಚಾರ್, ಚೇತನನಾಯಕ್, ಸುಖಾನಂದ್, ರಮೇಶ್ ನಾಯಕ್ ಮಾಣಿಬೆಟ್ಟು, ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ, ಅಶ್ವಿನಿ ಅರುಣ್ ಪೂಜಾರಿ, ಮಂಜುನಾಥ್ ಮಣಿಪಾಲ, ವೈದ್ಯಾಧಿಕಾರಿ ನರಸಿಂಹ ನಾಯಕ್, ಅರೋಗ್ಯ ಸಹಾಯಕಿಯರಾದ ಹರಿಣಾಕ್ಷಿ, ದಾವಲಬಿ ರುಸ್ತುಮ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಹಾಜರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago