ಉಡುಪಿ

ಉಡುಪಿ: ಸರ್ಕಾರದ ವಿವಿಧ ಸವಲತ್ತು ರೈತರಿಗೆ ಸಿಗಲು ಕೂಡಲೇ ಫ್ರೂಟ್ಸ್ (FRUITS ) ತಂತ್ರಾಂಶದಲ್ಲಿ ತಮ್ಮ ಜಮೀನಿನ ಮಾಹಿತಿಯನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಿ – Vishwanews24

ಉಡುಪಿ: ಸರ್ಕಾರದ ವಿವಿಧ ಸವಲತ್ತು ರೈತರಿಗೆ ಸಿಗಲು ಕೂಡಲೇ ಫ್ರೂಟ್ಸ್  (FRUITS )ತಂತ್ರಾಂಶದಲ್ಲಿ ತಮ್ಮ ಜಮೀನಿನ ಮಾಹಿತಿಯನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಿ – Vishwanews24

ಉಡುಪಿ: ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಪ್ರಕ್ರಿಯೆಯಲ್ಲಿ ಸಹಕಾರಿ ಯಾಗುವಂತೆ ರೈತರ ಜಮೀನಿನ ನಿಖರ ಹಾಗೂ ಸಂಪೂರ್ಣ ಮಾಹಿತಿಗಳನ್ನು ಸಂಗ್ರಹಿಸುವ ಸಲುವಾಗಿ ಆರಂಭ ಗೊಂಡಿರುವ ಫ್ರೂಟ್ಸ್ ಆ್ಯಪ್ ಕೆಲವೇ ದಿನಗಳಲ್ಲಿ ಮಾಹಿತಿ ನೋಂದಣಿಯಲ್ಲಿ 48.55ಶೇ. ಪ್ರಗತಿ ಸಾಧಿಸಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದು, ರೈತರ ಜಮೀನಿನ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಫ್ರೂಟ್ಸ್ (FRUITS – Farmers Registration & Unified Beneficiary Information System) ತಂತ್ರಾಂಶವನ್ನು ಬಳಸಲಾಗುತ್ತಿರುವುದರಿಂದ ಈ ತಂತ್ರಾಂಶದಲ್ಲಿ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಸರ್ಕಾರದಿಂದ ಈಗಾಗಲೇ ನಿರ್ದೇಶನವನ್ನು ನೀಡಲಾಗಿದೆ.

ಜಿಲ್ಲೆಯಲ್ಲಿ ಫ್ರೂಟ್ಸ್ ತಂತ್ರಾಂಶದಡಿ ಅ.6 ರಿಂದ 17 ರ ವರೆಗೆ 1,07,245 ಜಾಗದ ಪ್ಲಾಟ್‌ಗಳು ನೋಂದಣಿಯಾಗಿದ್ದು, ಜಿಲ್ಲೆಯು ಈ ವರೆಗೆ 48.55ಶೇ. ಪ್ರಗತಿ ಸಾಧಿಸಿದೆ. ಹೆಚ್ಚಿನ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಜಮೀನನ್ನು ನೋಂದಣಿ ಮಾಡಿಸಲು ಉತ್ತಮ ರೀತಿಯಲ್ಲಿ ಸ್ಪಂದಿಸಿ ಸರ್ಕಾರದ ಯೋಜನೆಯ ಸವಲತ್ತುಗಳನ್ನು ಪಡೆಯಲು ಸಹಕರಿಸಿದ್ದು, ಇನ್ನೂ ಹೆಚ್ಚಿನ ರೈತರು ತಮ್ಮ ಜಮೀನನ್ನು ನೋಂದಣಿ ಮಾಡಿಸಲು ಬಾಕಿಯಿದೆ. ಈ ಮಾಹಿತಿಯನ್ನು ಸರ್ಕಾರದ ವಿವಿಧ ಇಲಾಖೆಗಳ ಸವಲತ್ತುಗಳನ್ನು ನೀಡಲು ಮಾತ್ರ ಬಳಕೆ ಮಾಡುವುದರಿಂದ ರೈತರು ನಿರ್ಭೀತಿಯಿಂದ ತಮ್ಮ ಜಮೀನಿನ ಮಾಹಿತಿಯನ್ನು ನೀಡಿ ಫ್ರೂಟ್ಸ್ ತಂತ್ರಾಂಶದಲ್ಲಿ ಕೂಡಲೇ ನೋಂದಾಯಿಸಿಕೊಳ್ಳಲು ಸೂಚನೆ ನೀಡಿದ್ದಾರೆ.

ಆದುದರಿಂದ ಸಮಸ್ತ ರೈತರು ತಮ್ಮ ಆಧಾರ್‌ ಕಾರ್ಡ್‌ ಪ್ರತಿ ಹಾಗೂ ತಮ್ಮ ಮಾಲೀಕತ್ವದ ಎಲ್ಲಾ ಜಮೀನಿನ ಸರ್ವೇ ನಂಬರ್ ವಿವರವನ್ನು ತಮ್ಮ ಹತ್ತಿರದ ತಹಶೀಲ್ದಾರರ ಕಛೇರಿ/ ಕಂದಾಯ ನಿರೀಕ್ಷಕರ ಕಛೇರಿ/ ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿ, ರೈತ ಸಂಪರ್ಕ ಕೇಂದ್ರ, ನ್ಯಾಯಬೆಲೆ ಅಂಗಡಿ ಅಥವಾ ಕೃಷಿ/ತೋಟಗಾರಿಕೆ/ ರೇಷ್ಮೆ ಇಲಾಖೆಯ ಕಛೇರಿಗಳಿಗೆ ಕೂಡಲೇ ಒದಗಿಸಿ ತಮ್ಮ ದಾಖಲೆಗಳನ್ನು ಮುಂದಿನ 5 ದಿನಗಳ ಒಳಗಾಗಿ ನೀಡಿ ಫ್ರೂಟ್ಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಈ ಆ್ಯಪ್ ನ್ನು ಸರಕಾರದ ವಿವಿಧ ಯೋಜನೆಗಳಾದ ಕೃಷಿ ಇಲಾಖೆಯ ಪಿಎಂ ಕಿಸಾನ್, ಕೆ.ಕಿಸಾನ್ ಯೋಜನೆ, ತೋಟಗಾರಿಕಾ ಇಲಾಖೆಯ ಹಸಿರು ಯೋಜನೆ, ಹೈನುಗಾರಿಕೆ ಹಾಗೂ ಪಶು ಸಂಗೋಪನೆ ಇಲಾಖೆಯ ಯೋಜನೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಯೋಜನೆಗಳು , ರೇಷ್ಮೆ ಇಲಾಖೆಯಡಿ ಬರುವ ಯೋಜನೆಗಳು, ಬ್ಯಾಂಕ್ ಗಳಿಂದ ನೀಡಲಾಗುವ ಕೃಷಿ ಸಾಲ, ಬೆಳೆ ವಿಮೆ , ರಸಗೊಬ್ಬರ ಪೂರೈಕ ಹಾಗೂ ಕಂದಾಯ ಮತ್ತು ಇತರ ಇಲಾಖೆಗಳ ಯೋಜನೆಗಳ ಅನುಷ್ಠಾನ ಪ್ರಕ್ರಿಯೆಯಲ್ಲಿ ಸಹಕಾರಿಯಾಗುವಂತೆ ರೈತರ ಜಮೀನಿನ ನಿಖರ ಹಾಗೂ ಸಂಪೂರ್ಣ ಮಾಹಿತಿಗಳನ್ನು ಸಂಗ್ರಹಿಸುವ ಸಲುವಾಗಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

3 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

4 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

6 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

6 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

6 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

6 hours ago