ಉಡುಪಿ: ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ಬೆಳ್ಳಂಪಳ್ಳಿ ಗ್ರಾಮದ ಗೋಪಾಲ ಕಾಮತ್ ಅವರ ಪುತ್ರ ಜಯರಾಮ್ ಕಾಮತ್ (46) ನಾಪತ್ತೆಯಾದವರು. ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಜಯರಾಮ್ ಅವರನ್ನು ಕಾಯಿಲೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 16ರಂದು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಜಯರಾಮ್ ಅವರೊಂದಿಗೆ ಅವರ ಸಹೋದರ ಶ್ರೀಪತಿ ಕಾಮತ್ ಹಗಲು ಹೊತ್ತಿನಲ್ಲಿ ಆರೈಕೆಯಲ್ಲಿದ್ದರು. ಫೆಬ್ರವರಿ 21ರಂದು ಮಧ್ಯಾಹ್ನ 3.30ಕ್ಕೆ ಶ್ರೀಪತಿ ಕಾಮತ್ ಅವರು ಮನೆಗೆ ತೆರಳಿದ್ದರು. ಮರುದಿನ ಮತ್ತೆ ಆಸ್ಪತ್ರೆಗೆ ಹೋದಾಗ ಅಲ್ಲಿ ಜಯರಾಮ್ ಕಾಮತ್ ಇರಲಿಲ್ಲ.
ಇದರಿಂದ ಆತಂಕಿತರಾದ ಶ್ರೀಪತಿ ಕಾಮತ್ ವಿವಿಧೆಡೆ ಹುಡುಕಾಡಿದ್ದಾರೆ. ಇತ್ತ ಜಯರಾಮ್ ಕಾಮತ್ ಅವರು ಮನೆಗೂ ಬಾರದೆ, ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…