Featured

ಉಡುಪಿ ಸರ್ಕಾರಿ ಕಾಲೇಜು ಬುರ್ಕಾ/ಸ್ಕಾರ್ಫ್ ವಿವಾದ- ಫೀಲ್ಡ್ ಗೆ ಇಳಿದೆ ಬಿಡ್ತು ಹಿಂದು ಜಾಗರಣ ವೇದಿಕೆ : vishwanews24

ಉಡುಪಿ ಸರ್ಕಾರಿ ಕಾಲೇಜು ಬುರ್ಕಾ/ಸ್ಕಾರ್ಫ್ ವಿವಾದ- ಫೀಲ್ಡ್ ಗೆ ಇಳಿದೆ ಬಿಡ್ತು ಹಿಂದು ಜಾಗರಣ ವೇದಿಕೆ : vishwanews24

ಉಡುಪಿ: ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಚರ್ಚೆಗೆ ಒಳಗಾಗಿರುವ ಬುರ್ಕಾ ವಿವಾದಕ್ಕೆ ಹೊಸ ಬಣ್ಣಕ್ಕೆ ತಿರುಗುತ್ತಿರುವ ಸಮಯದಲ್ಲಿ ಉಡುಪಿ ಜಿಲ್ಲೆಯ ಹಿಂದೂ ಜಾಗರಣ ವೇದಿಕೆ ಇದರ ವಿರುದ್ಧ ಪತ್ರಿಕಾ ಪ್ರಕಟಣೆ ಮಾಡುವ ಮುಖಾಂತರ ಫೀಲ್ಡ್ ಗೆ ಎಂಟ್ರಿ ಕೊಟ್ಟಂತಿದೆ.
ಇಂದು ಜಾಗರಣ ವೇದಿಕೆಯ ಪತ್ರಿಕಾ ಪ್ರಕಟಣೆ ಹೊರಬಿದಿದ್ದು ಸದ್ಯ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಪ್ರಕಟನೆಯ ವರದಿ ಹೀಗಿದೆ ” ಶಾಲಾ ಸಮವಸ್ತದ ಹಾಗೂ ಬುರ್ಕಾ/ಹಿಜಾಬ್ ವಿವಾದ ಕುರಿತು

“ಜಿಲ್ಲೆಯ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಹೆಗ್ಗುರುತಾಗಿದ್ದ ಸಮವಸ್ತ್ರಧಾರಣೆ ಕುರಿತು ಕೆಲ ಮತೀಯ ಸಂಘಟನೆಗಳು, ಶಾಲಾ ಶೈಕ್ಷಣಿಕ ಸಾಮರಸ್ಯವನ್ನು ಕದಡುವ ಉದ್ದೇಶದಿಂದ ಒಂದು ಕೋಮಿನ ವಿದ್ಯಾರ್ಥಿಗಳನ್ನು ಪ್ರಚೋದನೆಗೆ ಒಳಪಡಿಸಿ ಬುರ್ಕಾ/ಹಿಜಾಬ್ ಧಲಸಿ ಕಾಲೇಜಿನ ಆವರಣದೊಳಗೆ ಪ್ರವೇಶಿಸಲು ಪ್ರಯತ್ನಿಸುವ ಘಟನೆಗಳು ನಡೆಯುತ್ತಿದೆ. ಅಲ್ಲದೆ ದಿನದಿಂದ ದಿನಕ್ಕೆ ಹಿಜಾಬ್ ವಿಷಯವನ್ನು ನೆಪವಾಗಿಸಿಕೊಂಡು ಇದೊಂದು ಅಂತರಾಷ್ಟ್ರೀಯ ಮಟ್ಟದ ಸಮಸ್ಯೆ ಎನ್ನುವ ರೀತಿಯಲ್ಲಿ ಬಿಂಬಿಸುವ ಕೆಲಸವೂ ನಡೆಯುತ್ತಿದ್ದು, ಇದರ ಹಿಂದೆ ಕೆಲ ಮತೀಯ ಸಂಘಟನೆಗಳ ಕೈವಾಡವಿರುವುದು ಕೂಡ ಜಗಜ್ಜಾಹೀರಾಗಿದೆ. ಈಗಾಗಲೇ ಈ ಮೇಲಿನ ಘಟನೆಗಳನ್ನು ಹಿಂದು ಜಾಗರಣ ವೇದಿಕೆ ಗಂಭೀರವಾಗಿ ಪರಿಗಣಿಸಿದ್ದು,ಒಂದು ವೇಳೆ ಸರಕಾರ ಹಾಗೂ ಶಿಕ್ಷಣ ಇಲಾಖೆ ಈ ಷಡ್ಯಂತ್ರದ ಒತ್ತಡಕ್ಕೆ ಮಣಿದು ಹಿಜಾಬ್ ದಲಿಸಲು ಅವಕಾಶ ನೀಡಿದ್ದೇ ಹೌದಾದಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ ಹಿಂದು ವಿದ್ಯಾರ್ಥಿಗಳನ್ನು ಸಂಘಟಿಸಿ ಸಮವಸ್ತ್ರದ ಜೊತೆಗೆ ಕೇಸರಿ ಶಲ್ಯ ಧರಿಸುವ ಅಭಿಯಾನವನ್ನು ಕೈಗೊಳ್ಳಲಿದೆ ಎನ್ನುವ ನೇರ ಎಚ್ಚರಿಕೆಯನ್ನು ಸಂಬಂಧ ಪಟ್ಟ ಇಲಾಖೆಗೆ ನೀಡುತ್ತಿದೆ.”
ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲೆ

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago