Featured

ಉಡುಪಿ: ಸಹಕಾರಿ ಬ್ಯಾಂಕಿನಲ್ಲಿ ಅವ್ಯವಹಾರ ಆರೋಪ :ಗ್ರಾಹಕರಿಗೆ ನ್ಯಾಯಕ್ಕಾಗಿ ಸರ್ಕಾರ ಮಧ್ಯಪ್ರವೇಶಿಸಲು ಬಿ ಕೆ ಹರಿಪ್ರಸಾದ್ ಆಗ್ರಹ – vishwanews24

ಉಡುಪಿ: ಸಹಕಾರಿ ಬ್ಯಾಂಕಿನಲ್ಲಿ ಅವ್ಯವಹಾರ ಆರೋಪ :ಗ್ರಾಹಕರಿಗೆ ನ್ಯಾಯಕ್ಕಾಗಿ  ಸರ್ಕಾರ ಮಧ್ಯಪ್ರವೇಶಿಸಲು ಬಿ ಕೆ ಹರಿಪ್ರಸಾದ್ ಆಗ್ರಹ

ಉಡುಪಿ: ಜಿಲ್ಲೆಯ ಸಹಕಾರಿ ಬ್ಯಾಂಕಿನಲ್ಲಿ ಭಾರಿ ಅವ್ಯವಹಾರ- ಗ್ರಾಹಕರಿಗೆ ನ್ಯಾಯಕ್ಕಾಗಿ ಸರ್ಕಾರ ಮಧ್ಯಪ್ರವೇಶಿಸಲು ಕಾಂಗ್ರೆಸ್ ಕೇಂದ್ರ ಕಾರ್ಯಕಾರಿ ಸಮಿತಿ ಖಾಯಂ ಆಹ್ವಾನಿತ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.

ಉಡುಪಿ ಮೂಲದ ಮಲ್ಪೆಯ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಹಣ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಬ್ಯಾಂಕಿನ ಅಮಾಯಕ ಗ್ರಾಹಕರು ಅನ್ಯಾಯಕ್ಕೆ ಒಳಗಾಗಿದ್ದಾರೆ.

ಬ್ಯಾಂಕಿನ ಸುಮಾರು 1,413 ಗ್ರಾಹಕರು ತಲಾ 20 ಸಾವಿರದಂತೆ ಸಾಲ ಪಡೆದಿದ್ದಾರೆ. ಆದರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ 2 ಲಕ್ಷ ಸಾಲ ಪಡೆದಿರುವುದಾಗಿ ದಾಖಲೆಗಳನ್ನು ಸೃಷ್ಟಿಸಿ ಬರೋಬ್ಬರಿ 20 ಕೋಟಿಗೂ ಹೆಚ್ಚು ಹಣ ಅವ್ಯವಹಾರ ನಡೆದಿರುವ ಆರೋಪಗಳು ಕೇಳಿ ಬರುತ್ತಿದೆ.

ನೂರಾರು ಗ್ರಾಹಕರು ತಾವು ಪಡೆದುಕೊಂಡ ಸಾಲದ ಹಣಕ್ಕಿಂತಲೂ ಹೆಚ್ಚಿನ ಹಣವನ್ನು ಈಗಾಗಲೇ ಪಾವತಿ ಮಾಡಿದ್ದಾರೆ. ಆದರೂ ಬ್ಯಾಂಕಿನ ಸಿಬ್ಬಂದಿಗಳು ದಬ್ಬಾಳಿಕೆ ದೌರ್ಜನ್ಯ ನಡೆಸಿ ಗ್ರಾಹಕರಿಂದ ಮತ್ತಷ್ಟು ಹಣ ಕೀಳುತ್ತಿದ್ದಾರೆಂದು ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಡಿಸಿ ಮೋಸ ಮಾಡಿದ್ದಲ್ಲದೆ ಗ್ರಾಹಕರ ಮೇಲೆಯೇ ದಬ್ಬಾಳಿಕೆ ನಡೆಸುತ್ತಿರುವುದು ಅಕ್ಷಮ್ಯ.

ಕೋ ಆಪರೇಟಿವ್ ಬ್ಯಾಂಕಿನಲ್ಲಿ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿವೆ. ಕಳೆದ ವರ್ಷ ಬ್ಯಾಂಕಿನ ಮ್ಯಾನೇಜರ್ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಹಲವು ಪ್ರಭಾವಿಗಳ ಕೈವಾಡ ಇರುವುದು ಸ್ಪಷ್ಟವಾಗಿದೆ. ಪ್ರಕರಣವೂ ಗಂಭೀರವಾಗಿದ್ದು ಕೂಡಲೇ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ, ಅನ್ಯಾಯಕ್ಕೊಳಗಾದ ಗ್ರಾಹಕರಿಗೆ ನ್ಯಾಯವದಗಿಸಿಕೊಡಬೇಕಾಗಿದೆ. ಆದ್ದರಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಕೂಡಲೇ ಕ್ರಮ ವಹಿಸಬೇಕೆಂದು ಸಂಬಂಧಪಟ್ಟವರಿಗೆ ಆಗ್ರಹಿಸುತ್ತೇನೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago