Featured

ಉಡುಪಿ: ಸಹಕಾರಿ ಬ್ಯಾಂಕಿನಲ್ಲಿ ಅವ್ಯವಹಾರ ಆರೋಪ :ಗ್ರಾಹಕರಿಗೆ ನ್ಯಾಯಕ್ಕಾಗಿ ಸರ್ಕಾರ ಮಧ್ಯಪ್ರವೇಶಿಸಲು ಬಿ ಕೆ ಹರಿಪ್ರಸಾದ್ ಆಗ್ರಹ – vishwanews24

ಉಡುಪಿ: ಸಹಕಾರಿ ಬ್ಯಾಂಕಿನಲ್ಲಿ ಅವ್ಯವಹಾರ ಆರೋಪ :ಗ್ರಾಹಕರಿಗೆ ನ್ಯಾಯಕ್ಕಾಗಿ  ಸರ್ಕಾರ ಮಧ್ಯಪ್ರವೇಶಿಸಲು ಬಿ ಕೆ ಹರಿಪ್ರಸಾದ್ ಆಗ್ರಹ

ಉಡುಪಿ: ಜಿಲ್ಲೆಯ ಸಹಕಾರಿ ಬ್ಯಾಂಕಿನಲ್ಲಿ ಭಾರಿ ಅವ್ಯವಹಾರ- ಗ್ರಾಹಕರಿಗೆ ನ್ಯಾಯಕ್ಕಾಗಿ ಸರ್ಕಾರ ಮಧ್ಯಪ್ರವೇಶಿಸಲು ಕಾಂಗ್ರೆಸ್ ಕೇಂದ್ರ ಕಾರ್ಯಕಾರಿ ಸಮಿತಿ ಖಾಯಂ ಆಹ್ವಾನಿತ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.

ಉಡುಪಿ ಮೂಲದ ಮಲ್ಪೆಯ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಹಣ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಬ್ಯಾಂಕಿನ ಅಮಾಯಕ ಗ್ರಾಹಕರು ಅನ್ಯಾಯಕ್ಕೆ ಒಳಗಾಗಿದ್ದಾರೆ.

ಬ್ಯಾಂಕಿನ ಸುಮಾರು 1,413 ಗ್ರಾಹಕರು ತಲಾ 20 ಸಾವಿರದಂತೆ ಸಾಲ ಪಡೆದಿದ್ದಾರೆ. ಆದರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ 2 ಲಕ್ಷ ಸಾಲ ಪಡೆದಿರುವುದಾಗಿ ದಾಖಲೆಗಳನ್ನು ಸೃಷ್ಟಿಸಿ ಬರೋಬ್ಬರಿ 20 ಕೋಟಿಗೂ ಹೆಚ್ಚು ಹಣ ಅವ್ಯವಹಾರ ನಡೆದಿರುವ ಆರೋಪಗಳು ಕೇಳಿ ಬರುತ್ತಿದೆ.

ನೂರಾರು ಗ್ರಾಹಕರು ತಾವು ಪಡೆದುಕೊಂಡ ಸಾಲದ ಹಣಕ್ಕಿಂತಲೂ ಹೆಚ್ಚಿನ ಹಣವನ್ನು ಈಗಾಗಲೇ ಪಾವತಿ ಮಾಡಿದ್ದಾರೆ. ಆದರೂ ಬ್ಯಾಂಕಿನ ಸಿಬ್ಬಂದಿಗಳು ದಬ್ಬಾಳಿಕೆ ದೌರ್ಜನ್ಯ ನಡೆಸಿ ಗ್ರಾಹಕರಿಂದ ಮತ್ತಷ್ಟು ಹಣ ಕೀಳುತ್ತಿದ್ದಾರೆಂದು ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಡಿಸಿ ಮೋಸ ಮಾಡಿದ್ದಲ್ಲದೆ ಗ್ರಾಹಕರ ಮೇಲೆಯೇ ದಬ್ಬಾಳಿಕೆ ನಡೆಸುತ್ತಿರುವುದು ಅಕ್ಷಮ್ಯ.

ಕೋ ಆಪರೇಟಿವ್ ಬ್ಯಾಂಕಿನಲ್ಲಿ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿವೆ. ಕಳೆದ ವರ್ಷ ಬ್ಯಾಂಕಿನ ಮ್ಯಾನೇಜರ್ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಹಲವು ಪ್ರಭಾವಿಗಳ ಕೈವಾಡ ಇರುವುದು ಸ್ಪಷ್ಟವಾಗಿದೆ. ಪ್ರಕರಣವೂ ಗಂಭೀರವಾಗಿದ್ದು ಕೂಡಲೇ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ, ಅನ್ಯಾಯಕ್ಕೊಳಗಾದ ಗ್ರಾಹಕರಿಗೆ ನ್ಯಾಯವದಗಿಸಿಕೊಡಬೇಕಾಗಿದೆ. ಆದ್ದರಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಕೂಡಲೇ ಕ್ರಮ ವಹಿಸಬೇಕೆಂದು ಸಂಬಂಧಪಟ್ಟವರಿಗೆ ಆಗ್ರಹಿಸುತ್ತೇನೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago