ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಈಗ ಕಂಬಳದ ಸೀಸನ್ ಪ್ರಾರಂಭಗೊಂಡಿದೆ. ಈಗೀಗ ಸಾಂಪ್ರದಾಯಿಕ ಕಂಬಳಗಳ ಆಯೋಜನೆಗೂ ಲಕ್ಷಾಂತರ ರೂ. ಖರ್ಚಾಗುತ್ತಿದೆ. ಹೀಗಾಗಿ ಈ ಆಚರಣೆಯನ್ನು ಉಳಿಸಿ-ಬೆಳೆಸಲು ಸರಕಾರದ ಅನುದಾನ ಅಗತ್ಯವಿದೆ ಎಂದು ಸಾಂಪ್ರದಾಯಿಕ ಕಂಬಳ ಸಮಿತಿ ಸರಕಾರವನ್ನು ಒತ್ತಾಯಿಸಿದೆ.
ಉಡುಪಿ ಜಿಲ್ಲೆಯಲ್ಲಿ ವಂಡಾರು, ಕೊಡೇರಿ ಹಕ್ರೆಮಠ, ಉಳ್ಳೂರು, ಮಣೂರು, ಬಿಲ್ಲಾಡಿ, ಕೆರಾಡಿ, ಹೆಗ್ಗುಂಜೆ, ಎಲ್ಲೂರು, ಯಡ್ತಾಡಿ ಸಹಿತ 55 ರಿಂದ 60 ಕಡೆ ಸಾಂಪ್ರದಾಯಿಕ ಕಂಬಳಗಳು ನಡೆಯುತ್ತವೆ. ಜಿಲ್ಲೆಯ ಕಂಬಳಗಳಲ್ಲಿ ಶೇ.99 ರಷ್ಟು ಸಾಂಪ್ರದಾಯಿಕವೇ ಆಗಿವೆ.
ಸ್ಪರ್ಧಾ ಕಂಬಳಕ್ಕೆ ಈ ಹಿಂದೆ ಸರಕಾರ 5 ಲಕ್ಷ ರೂ. ತನಕ ಅನುದಾನ ನೀಡುತ್ತಿತ್ತು. ಆದರೆ ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳಗಳಿಗೆ ಈ ತನಕ ಅನುದಾನ ನೀಡಿಲ್ಲ.ಸರಕಾರ ಈ ಅಧಿವೇಶನದಲ್ಲಿ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಮಿತಿಯ ಅಧ್ಯಕ್ಷ ಸುಧಾಕರ ಹೆಗ್ಡೆ ಮತ್ತು ಕಾರ್ಯದರ್ಶಿ ಪೃಥ್ವಿರಾಜ್ ಒತ್ತಾಯ ಮಾಡಿದ್ದಾರೆ.
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…