Featured

ಉಡುಪಿ : ಸಾಕ್ಷರತೆಯಿಂದ ಹಕ್ಕುಗಳ ಬಗ್ಗೆ ಅರಿಯಲು ಸಾಧ್ಯ : ನ್ಯಾ.ಶರ್ಮಿಳಾ – Vishwanews24

ಉಡುಪಿ : ಸಾಕ್ಷರತೆಯಿಂದ ಹಕ್ಕುಗಳ ಬಗ್ಗೆ ಅರಿಯಲು ಸಾಧ್ಯ : ನ್ಯಾ.ಶರ್ಮಿಳಾ – Vishwanews24

ಉಡುಪಿ: ಯಾವುದೇ ವ್ಯಕ್ತಿ ಸಾಕ್ಷರನಾದರೆ ತನ್ನ ಹಕ್ಕುಗಳ ಬಗ್ಗೆ ಅರಿವು ಹೊಂದಲು ಸಾದ್ಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದುವುದು ಅತ್ಯಂತ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು.

ಅವರು ಇಂದು ಕಾಜಾರಗುತ್ತು ನ ಜಿಲ್ಲಾ ಕಾರಾಗೃಹದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ , ಕಾರಾಗೃಹ ಮತ್ತು ಸುಧಾರಣಾ ಸೇವೆ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಉಡುಪಿ,ಜಿಲ್ಲಾ ಕಾರಾಗೃಹ ಉಡುಪಿ ಇವರ ಸಹಯೋಗದಲ್ಲಿ “ಶಿಕ್ಷಣದಿಂದ ಬದಲಾವಣೆ” ಕಾರಾಗೃಹದ ಅನಕ್ಷರಸ್ಥ ಹಾಗೂ ಅರೆ ಅನಕ್ಷರಸ್ಥ ಬಂಧಿಗಳಿಗೆ ಆಯೋಜಿಸಿದ್ದ ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಕ್ಷರತೆ ಪಡೆಯುವುದು ವ್ಯಕ್ತಿಯ ಘನತೆ ಹಾಗೂ ಹಕ್ಕು ಆಗಿದೆ. ವ್ಯಕ್ತಿ ಸಾಕ್ಷರತೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳಬೇಕು, ಅನಕ್ಷರತೆಯಿಂದ ಬಡತನ, ಜನಸಂಖ್ಯೆ ನಿಯಂತ್ರಣ ಸಮಸ್ಯೆ,ಲಿಂಗ ಅಸಮಾನತೆ ಉಂಟಾಗಲಿದ್ದು,ಇದನ್ನು ತೊಡೆದು ಹಾಕಿ ದೇಶವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲು ಸಾಕ್ಷರತೆಯಿಂದ ಮಾತ್ರ ಸಾಧ್ಯ ಎಂದು ಆಭಿಪ್ರಾಯ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಪ್ರತಿಯೊಬ್ಬರಿಗೂ ಕನಿಷ್ಠ ಓದುವ ಸಾಮರ್ಥ್ಯ ಅಗತ್ಯ ಇದರಿಂದ ತಮ್ಮ ದೈನಂದಿನ ವ್ಯವಹಾರಗಳನ್ನು ಸುಗಮವಾಗಿ ಮಾಡಲು ಸಾಧ್ಯ, ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡುವ ಜವಾಬ್ದಾರಿ ವಿದ್ಯಾವಂತರದ್ದಾಗಿದೆ. ವಯಸ್ಕರ ಶಿಕ್ಷಣ ಇಲಾಖೆಯಿಂದ ಸಿದ್ದಪಡಿಸಿರುವ ಪಠ್ಯವು ಅತ್ಯಂತ ಸರಳವಾಗಿದ್ದು, ಇದರಿಂದ 2 ತಿಂಗಳಲ್ಲಿ
ಅನಕ್ಷರಸ್ಥರು ಸಾಕ್ಷರರಾಗಲು ಸಾದ್ಯವಿದೆ ಎಂದರು.

ಜಿಲ್ಲಾ ಕಾರಾಗೃಹದಲ್ಲಿನ 7 ಮಂದಿ ಅನಕ್ಷರಸ್ಥರು ಮತ್ತು 20 ಮಂದಿ ಅರೆ ಅನಕ್ಷರಸ್ಥರಿಗೆ ಈ ತರಬೇತಿ ಆಯೋಜಿಸಲಾಗಿದೆ.
ಕಾರಾಗೃಹದಲ್ಲಿನ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಉದ್ಘಾಟಿಸಿದರು. ಎಎಸ್ಪಿ ಕುಮಾರ ಚಂದ್ರ ಕಾರಾಗೃಹದಲ್ಲಿನ ಅನಕ್ಷರಸ್ಥರು ಮತ್ತು ಅರೆ ಅನಕ್ಷರಸ್ಥರಿಗೆ ಕಲಿಕಾ ಪುಸ್ತಕಗಳನ್ನು ವಿತರಿಸಿದರು. ಹಿರಿಯ ವಕೀಲೆ ಅಮೃತಕಲಾ ಉಪಸ್ಥಿತರಿದ್ದರು. ಜಿಲ್ಲಾ ಕಾರಾಗೃಹದ ಅಧೀಕ್ಷಕ ಶ್ರೀನಿವಾಸ್ ಸ್ವಾಗತಿಸಿ ನಿರೂಪಿಸಿದರು. ಸಂಜಯ್ ಕುಮಾರ್ ವಂದಿಸಿದರು.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

12 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

16 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

16 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

16 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

17 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

17 hours ago