Featured

ಉಡುಪಿ : ಸಾಕ್ಷರತೆಯಿಂದ ಹಕ್ಕುಗಳ ಬಗ್ಗೆ ಅರಿಯಲು ಸಾಧ್ಯ : ನ್ಯಾ.ಶರ್ಮಿಳಾ – Vishwanews24

ಉಡುಪಿ : ಸಾಕ್ಷರತೆಯಿಂದ ಹಕ್ಕುಗಳ ಬಗ್ಗೆ ಅರಿಯಲು ಸಾಧ್ಯ : ನ್ಯಾ.ಶರ್ಮಿಳಾ – Vishwanews24

ಉಡುಪಿ: ಯಾವುದೇ ವ್ಯಕ್ತಿ ಸಾಕ್ಷರನಾದರೆ ತನ್ನ ಹಕ್ಕುಗಳ ಬಗ್ಗೆ ಅರಿವು ಹೊಂದಲು ಸಾದ್ಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದುವುದು ಅತ್ಯಂತ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು.

ಅವರು ಇಂದು ಕಾಜಾರಗುತ್ತು ನ ಜಿಲ್ಲಾ ಕಾರಾಗೃಹದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ , ಕಾರಾಗೃಹ ಮತ್ತು ಸುಧಾರಣಾ ಸೇವೆ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಉಡುಪಿ,ಜಿಲ್ಲಾ ಕಾರಾಗೃಹ ಉಡುಪಿ ಇವರ ಸಹಯೋಗದಲ್ಲಿ “ಶಿಕ್ಷಣದಿಂದ ಬದಲಾವಣೆ” ಕಾರಾಗೃಹದ ಅನಕ್ಷರಸ್ಥ ಹಾಗೂ ಅರೆ ಅನಕ್ಷರಸ್ಥ ಬಂಧಿಗಳಿಗೆ ಆಯೋಜಿಸಿದ್ದ ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಕ್ಷರತೆ ಪಡೆಯುವುದು ವ್ಯಕ್ತಿಯ ಘನತೆ ಹಾಗೂ ಹಕ್ಕು ಆಗಿದೆ. ವ್ಯಕ್ತಿ ಸಾಕ್ಷರತೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳಬೇಕು, ಅನಕ್ಷರತೆಯಿಂದ ಬಡತನ, ಜನಸಂಖ್ಯೆ ನಿಯಂತ್ರಣ ಸಮಸ್ಯೆ,ಲಿಂಗ ಅಸಮಾನತೆ ಉಂಟಾಗಲಿದ್ದು,ಇದನ್ನು ತೊಡೆದು ಹಾಕಿ ದೇಶವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲು ಸಾಕ್ಷರತೆಯಿಂದ ಮಾತ್ರ ಸಾಧ್ಯ ಎಂದು ಆಭಿಪ್ರಾಯ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಪ್ರತಿಯೊಬ್ಬರಿಗೂ ಕನಿಷ್ಠ ಓದುವ ಸಾಮರ್ಥ್ಯ ಅಗತ್ಯ ಇದರಿಂದ ತಮ್ಮ ದೈನಂದಿನ ವ್ಯವಹಾರಗಳನ್ನು ಸುಗಮವಾಗಿ ಮಾಡಲು ಸಾಧ್ಯ, ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡುವ ಜವಾಬ್ದಾರಿ ವಿದ್ಯಾವಂತರದ್ದಾಗಿದೆ. ವಯಸ್ಕರ ಶಿಕ್ಷಣ ಇಲಾಖೆಯಿಂದ ಸಿದ್ದಪಡಿಸಿರುವ ಪಠ್ಯವು ಅತ್ಯಂತ ಸರಳವಾಗಿದ್ದು, ಇದರಿಂದ 2 ತಿಂಗಳಲ್ಲಿ
ಅನಕ್ಷರಸ್ಥರು ಸಾಕ್ಷರರಾಗಲು ಸಾದ್ಯವಿದೆ ಎಂದರು.

ಜಿಲ್ಲಾ ಕಾರಾಗೃಹದಲ್ಲಿನ 7 ಮಂದಿ ಅನಕ್ಷರಸ್ಥರು ಮತ್ತು 20 ಮಂದಿ ಅರೆ ಅನಕ್ಷರಸ್ಥರಿಗೆ ಈ ತರಬೇತಿ ಆಯೋಜಿಸಲಾಗಿದೆ.
ಕಾರಾಗೃಹದಲ್ಲಿನ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಉದ್ಘಾಟಿಸಿದರು. ಎಎಸ್ಪಿ ಕುಮಾರ ಚಂದ್ರ ಕಾರಾಗೃಹದಲ್ಲಿನ ಅನಕ್ಷರಸ್ಥರು ಮತ್ತು ಅರೆ ಅನಕ್ಷರಸ್ಥರಿಗೆ ಕಲಿಕಾ ಪುಸ್ತಕಗಳನ್ನು ವಿತರಿಸಿದರು. ಹಿರಿಯ ವಕೀಲೆ ಅಮೃತಕಲಾ ಉಪಸ್ಥಿತರಿದ್ದರು. ಜಿಲ್ಲಾ ಕಾರಾಗೃಹದ ಅಧೀಕ್ಷಕ ಶ್ರೀನಿವಾಸ್ ಸ್ವಾಗತಿಸಿ ನಿರೂಪಿಸಿದರು. ಸಂಜಯ್ ಕುಮಾರ್ ವಂದಿಸಿದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago