ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅಂತವರ ವಿರುದ್ದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಫೇಸ್ ಬುಕ್, ವಾಟ್ಸಾಪ್, ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪ್ರಚೋದನಕಾರಿ ಹೇಳಿಕೆ (ಪೋಸ್ಟ್) ಗಳನ್ನು ಹಾಕುವವರ/ಫಾರ್ವರ್ಡ್ ಮಾಡುವವರ ವಿರುದ್ದವೂ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಈ ಬಗ್ಗೆ ವಾಟ್ಸಪ್, ಗ್ರೂಪ್ ಅಡ್ಮಿನ್ ಗಳು ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸುವುದು ಹಾಗೂ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಬೇಕು.
ಸಂಘಟನೆ, ವ್ಯಕ್ತಿಗಳು ಸೇರಿದಂತೆ ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿರುವ ನಾನಾ ವ್ಯಕ್ತಿಗಳು, ಗುಂಪುಗಳ ಮೇಲೆ ಕಠಿಣ ನಿಗಾ ಇರಿಸಲಾಗಿದೆ. ಆನ್ಲೈನ್ ಮಾಧ್ಯಮ, ವೆಬ್ ಪೇಜ್, ಮುದ್ರಣ ಮಾಧ್ಯಮ ಮೇಲೂ ನಿಗಾ ವಹಿಸಲಾಗಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ಭಾವನೆ ಸೃಷ್ಟಿಸಿ, ಜಾತಿ ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಫೋಸ್ಟ್ಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು, ಇಂತಹ ಪೋಸ್ಟ್ಗಳನ್ನು ಲೈಕ್, ಶೇರ್, ಫಾರ್ವಡ್ ಹಾಗೂ ಆಕ್ಷೇಪಾರ್ಹವಾಗಿ ಕಮೆಂಟ್ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಯಾರೇ ಆದರೂ ವಿವಾದಾತ್ಮಕ ಪೋಸ್ಟರ್, ಪ್ರಚೋಧನಾಕಾರಿ ಹೇಳಿಕೆ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್ಓಗೆ ಮನವಿ ಉಡುಪಿ: ಉಡುಪಿ…
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್ ಸಾಗಿಸುತ್ತಿದ್ದ…
ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ : ಮುದರಂಗಡಿ ಗ್ರಾಮ ಪಂಚಾಯತ್…