Featured

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಎಸ್ಪಿ ಎನ್ ವಿಷ್ಣುವರ್ಧನ ಎಚ್ಚರಿಕೆ – Vishwanews24

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಎಸ್ಪಿ ಎನ್ ವಿಷ್ಣುವರ್ಧನ ಎಚ್ಚರಿಕೆ

ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅಂತವರ ವಿರುದ್ದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಫೇಸ್ ಬುಕ್, ವಾಟ್ಸಾಪ್, ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪ್ರಚೋದನಕಾರಿ ಹೇಳಿಕೆ (ಪೋಸ್ಟ್) ಗಳನ್ನು ಹಾಕುವವರ/ಫಾರ್ವರ್ಡ್ ಮಾಡುವವರ ವಿರುದ್ದವೂ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಈ ಬಗ್ಗೆ ವಾಟ್ಸಪ್, ಗ್ರೂಪ್ ಅಡ್ಮಿನ್ ಗಳು ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸುವುದು ಹಾಗೂ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಬೇಕು.

ಸಂಘಟನೆ, ವ್ಯಕ್ತಿಗಳು ಸೇರಿದಂತೆ ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿರುವ ನಾನಾ ವ್ಯಕ್ತಿಗಳು, ಗುಂಪುಗಳ ಮೇಲೆ ಕಠಿಣ ನಿಗಾ ಇರಿಸಲಾಗಿದೆ. ಆನ್ಲೈನ್ ಮಾಧ್ಯಮ, ವೆಬ್ ಪೇಜ್, ಮುದ್ರಣ ಮಾಧ್ಯಮ ಮೇಲೂ ನಿಗಾ ವಹಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ಭಾವನೆ ಸೃಷ್ಟಿಸಿ, ಜಾತಿ ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಫೋಸ್ಟ್ಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು, ಇಂತಹ ಪೋಸ್ಟ್ಗಳನ್ನು ಲೈಕ್, ಶೇರ್, ಫಾರ್ವಡ್ ಹಾಗೂ ಆಕ್ಷೇಪಾರ್ಹವಾಗಿ ಕಮೆಂಟ್ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಯಾರೇ ಆದರೂ ವಿವಾದಾತ್ಮಕ ಪೋಸ್ಟರ್, ಪ್ರಚೋಧನಾಕಾರಿ ಹೇಳಿಕೆ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago