Featured

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಸಾಲ ಸೌಲಭ್ಯಗಳಿಗೆ ಸಂಪರ್ಕಿಸುವಂತೆ ನಕಲಿ ಕರಪತ್ರ : ಜಿಲ್ಲಾಡಳಿತ ಎಚ್ಚರಿಕೆ – vishwanews24

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಸಾಲ ಸೌಲಭ್ಯಗಳಿಗೆ ಸಂಪರ್ಕಿಸುವಂತೆ ನಕಲಿ ಕರಪತ್ರ : ದಾಖಲೆ ನೀಡಬಾರದೆಂದು ಸಾರ್ವಜನಿಕರಲ್ಲಿ ಜಿಲ್ಲಾಡಳಿತ ಮನವಿ

ಉಡುಪಿ: ಕಳೆದ ಒಂದೆರಡು ದಿನಗಳಿಂದ ಮಲ್ಪೆ ಸುತ್ತುಮುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಎಲ್ಲಾ ತರದ ಸಾಲ ಸೌಲಭ್ಯಗಳಿಗೆ ಸಂಪರ್ಕಿಸುವಂತೆ ಕರಪತ್ರ ಹಂಚುತ್ತಿದ್ದು, ಇದನ್ನು ನಂಬಿ ಯಾವುದೇ ರೀತಿಯ ವ್ಯವಹಾರ, ದಾಖಲೆ ನೀಡಬಾರದು ಎಂದು ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕೇವಲ ಮೊಬೈಲ್ ನಂಬ್ರ ಮಾತ್ರ ಹೊಂದಿರುವ ಈ ಕರಪತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಎಲ್ಲಾ ತರದ ಸಾಲ ಸೌಲಭ್ಯ ಗಳಿಗಾಗಿ ಸಂಬಂಧಿಸಿದ ದಾಖಲೆಗಳ ಜೊತೆ ಸಂಪರ್ಕಿಸುವಂತೆ ಎರಡು ಮೊಬೈಲ್ ನಂಬ್ರ ನೀಡಿರುವುದು ಕಂಡುಬರುತ್ತದೆ.

ಆದರೆ ಸರಕಾರದ ಅಧಿಕೃತ ಪರವಾನಗಿಯನ್ನು ಸೂಕ್ತ ಪ್ರಾಧಿಕಾರದಿಂದ ಪಡೆಯದೆ ಹಾಗೂ ಸಂಸ್ಥೆಯ ಹೆಸರು, ವಿಳಾಸ ತಿಳಿಸದೆ, ಅನಧಿಕೃತವಾಗಿ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಾರ್ವಜನಿಕರು ಈ ರೀತಿಯ ಪ್ರಚೋದನೆಗೆ ಒಳಗಾಗದೆ ಯಾವುದೇ ರೀತಿಯ ವ್ಯವಹಾರ, ದಾಖಲೆ ನೀಡುವುದು ಮಾಡದೇ ಇರುವುದು ಒಳಿತು. ಒಂದೊಮ್ಮೆ ಮಾಡಿದರೆ ಇದಕ್ಕೆ ಜಿಲ್ಲಾಡಳಿತ ಜವಾಬ್ದಾರಿ ಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago