ಉಡುಪಿ: ಕಳೆದ ಒಂದೆರಡು ದಿನಗಳಿಂದ ಮಲ್ಪೆ ಸುತ್ತುಮುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಎಲ್ಲಾ ತರದ ಸಾಲ ಸೌಲಭ್ಯಗಳಿಗೆ ಸಂಪರ್ಕಿಸುವಂತೆ ಕರಪತ್ರ ಹಂಚುತ್ತಿದ್ದು, ಇದನ್ನು ನಂಬಿ ಯಾವುದೇ ರೀತಿಯ ವ್ಯವಹಾರ, ದಾಖಲೆ ನೀಡಬಾರದು ಎಂದು ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಕೇವಲ ಮೊಬೈಲ್ ನಂಬ್ರ ಮಾತ್ರ ಹೊಂದಿರುವ ಈ ಕರಪತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಎಲ್ಲಾ ತರದ ಸಾಲ ಸೌಲಭ್ಯ ಗಳಿಗಾಗಿ ಸಂಬಂಧಿಸಿದ ದಾಖಲೆಗಳ ಜೊತೆ ಸಂಪರ್ಕಿಸುವಂತೆ ಎರಡು ಮೊಬೈಲ್ ನಂಬ್ರ ನೀಡಿರುವುದು ಕಂಡುಬರುತ್ತದೆ.
ಆದರೆ ಸರಕಾರದ ಅಧಿಕೃತ ಪರವಾನಗಿಯನ್ನು ಸೂಕ್ತ ಪ್ರಾಧಿಕಾರದಿಂದ ಪಡೆಯದೆ ಹಾಗೂ ಸಂಸ್ಥೆಯ ಹೆಸರು, ವಿಳಾಸ ತಿಳಿಸದೆ, ಅನಧಿಕೃತವಾಗಿ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಾರ್ವಜನಿಕರು ಈ ರೀತಿಯ ಪ್ರಚೋದನೆಗೆ ಒಳಗಾಗದೆ ಯಾವುದೇ ರೀತಿಯ ವ್ಯವಹಾರ, ದಾಖಲೆ ನೀಡುವುದು ಮಾಡದೇ ಇರುವುದು ಒಳಿತು. ಒಂದೊಮ್ಮೆ ಮಾಡಿದರೆ ಇದಕ್ಕೆ ಜಿಲ್ಲಾಡಳಿತ ಜವಾಬ್ದಾರಿ ಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…