Featured

ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಗ್ಯಾಸ್ ಸಬ್ಸಿಡಿ ಮೆಸೇಜ್ – ಇಲಾಖೆಯಿಂದ ಸ್ಪಷ್ಟೀಕರಣ – vishwanews24

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ..

ಗ್ಯಾಸ್ ಸಬ್ಸಿಡಿ ಹಾಗೂ ಇ-ಕೆವೈಸಿಗೂ ಯಾವುದೇ ಸಂಬಂಧವಿಲ್ಲ..

ಆಧಾರ್ ದೃಢೀಕರಣ ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಕಡ್ಡಾಯ..

ಉಡುಪಿ : “ಆಧಾರ್ ಲಿಂಕ್ ಮಾಡಿಸಿ, ಇ-ಕೆವೈಸಿ ಮಾಡದೇ ಇದ್ದರೆ ಸಬ್ಸಿಡಿ ಬರುವುದಿಲ್ಲ, ಗೃಹ ಬಳಕೆಯ ಸಂಪರ್ಕ ವಾಣಿಜ್ಯ ಬಳಕೆಯ ಗ್ಯಾಸ್ ಸಂಪರ್ಕವಾಗಿ ಬದಲಾಗಲಿದೆ, ಗ್ಯಾಸ್ ಸಂಪರ್ಕ ರದ್ದಾಗಲಿದೆ ಎಂಬ ಇತ್ಯಾದಿ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹಬಳಕೆಯ ಗ್ಯಾಸ್ ಸಂಪರ್ಕ ಪಡೆದವರು ಇ-ಕೆವೈಸಿ ಮಾಡಿಸಿಕೊಳ್ಳಲು ಜನರು ಗ್ಯಾಸ್ ಏಜೆನ್ಸಿಗಳ ಕಚೇರಿಗಳನ್ನು ಮುತ್ತಿಗೆ ಹಾಕಿರುವ ದೃಶ್ಯ ಕರಾವಳಿಯ ಜಿಲ್ಲೆಯಲ್ಲಿ ಕಂಡುಬರುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶಗಳ ಹಿನ್ನೆಲೆ ಜನರು ಗೊಂದಲಕ್ಕೀಡಾಗಿದ್ದು, ಕಳೆದೊಂದು ವಾರದಿಂದ ಗ್ಯಾಸ್ ಏಜೆನ್ಸಿಗಳ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲೆಯ ಪ್ರಮುಖ ಗ್ಯಾಸ್ ಏಜೆಂಟ್ ಒಬ್ಬರು, ಗ್ರಾಹರೆಲ್ಲರಿಗೂ ಇ-ಕೆವೈಸಿ ಮಾಡಲು ಸೂಚನೆ ಬಂದಿರುವುದರಿಂದ ಎಲ್ಲಾ ಗ್ಯಾಸ್ ಏಜೆನ್ಸಿಗಳಲ್ಲಿ ಗ್ರಾಹಕರ ಬೆರಳಚ್ಚು ಪಡೆದು ಆಧಾರ್ ಲಿಂಕ್ ಹಾಗೂ ಇ-ಕೆವೈಸಿ ಮಾಡಿಸಲಾಗುತ್ತಿದೆ. ಆದರೆ ಮತ್ತೆ ಸಬ್ಸಿಡಿ ಸಿಗಲಿದೆ, ಡಿ. 31ರೊಳಗೆ ಈ ಪ್ರಕ್ರಿಯೆ ಮುಗಿಸಬೇಕು ಎಂಬ ವಿಷಯಗಳಿಗೂ ಇ-ಕೆವೈಸಿಗೂ ಯಾವ ಸಂಬಂಧವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ಬರುತ್ತಿರುವುದರಿಂದ ಅವರನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದರು.

“ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸಂದೇಶವೊಂದು ವೈರಲ್ ಆಗುತ್ತಿರುವ ಬಗ್ಗೆ ಮಾಹಿತಿ ಬಂದಿವೆ.ಆಧಾರ್ ದೃಢೀಕರಣವು ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಕಡ್ಡಾಯವಾಗಿದೆ. ಉಳಿದ ಬಳಕೆದಾರರಿಗೆ ಗ್ಯಾಸ್ ಸಬ್ಸಿಡಿಯ ಬಗ್ಗೆ ಪ್ರಸ್ತುತ ಯಾವುದೇ ಘೋಷಣೆ ಆಗಿರುವುದಿಲ್ಲ. ಗ್ಯಾಸ್ ಬಳಕೆದಾರರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ದಕ್ಷಿಣ ಕನ್ನಡ ಆಹಾರ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ”.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ ಗ್ಯಾಸ್ ಸಂಪರ್ಕ ಇರುವವರು ಡಿ. 31ರೊಳಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಗ್ಯಾಸ್ ಏಜೆನ್ಸಿ ನೀಡಿರುವ ಪುಸ್ತಕ ಅಥವಾ ಕಾರ್ಡ್ ಜೊತೆಗೆ ಏಜೆನ್ಸಿ ಕಚೇರಿಗೆ ಭೇಟಿ ನೀಡಿ, ಕೆವೈಸಿ ಮಾಡಿಸಬೇಕು. ಕೆವೈಸಿ ಮಾಡಿಸಿದರೆ ಜ. 1ರಿಂದ ಸಬ್ಸಿಡಿ ಬರುತ್ತದೆ. ಪ್ರಸ್ತುತ ಸಿಲಿಂಡರ್ ಗೆ 903 ರೂ. ಇದ್ದು, ಸಬ್ಸಿಡಿಯ ಬಳಿಕ 500 ರೂ.ಗಳಿಗೆ ಸಿಲಿಂಡರ್ ಸಿಗುತ್ತದೆ. ಕೆವೈಸಿ ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಗ್ಯಾಸ್ ಸಂಪರ್ಕವು ಕಮರ್ಶಿಯಲ್ ಆಗಿ ಮಾರ್ಪಡುತ್ತದೆ. ಆಗ ಸಿಲಿಂಡರ್ ಗೆ 1,400 ರೂ. ಹಣ ನೀಡಬೇಕಾಗುತ್ತದೆ ಎಂದು ಸಂದೇಶ ವೈರಲ್ ಆಗುತ್ತಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago