Featured

ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಗ್ಯಾಸ್ ಸಬ್ಸಿಡಿ ಮೆಸೇಜ್ – ಇಲಾಖೆಯಿಂದ ಸ್ಪಷ್ಟೀಕರಣ – vishwanews24

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ..

ಗ್ಯಾಸ್ ಸಬ್ಸಿಡಿ ಹಾಗೂ ಇ-ಕೆವೈಸಿಗೂ ಯಾವುದೇ ಸಂಬಂಧವಿಲ್ಲ..

ಆಧಾರ್ ದೃಢೀಕರಣ ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಕಡ್ಡಾಯ..

ಉಡುಪಿ : “ಆಧಾರ್ ಲಿಂಕ್ ಮಾಡಿಸಿ, ಇ-ಕೆವೈಸಿ ಮಾಡದೇ ಇದ್ದರೆ ಸಬ್ಸಿಡಿ ಬರುವುದಿಲ್ಲ, ಗೃಹ ಬಳಕೆಯ ಸಂಪರ್ಕ ವಾಣಿಜ್ಯ ಬಳಕೆಯ ಗ್ಯಾಸ್ ಸಂಪರ್ಕವಾಗಿ ಬದಲಾಗಲಿದೆ, ಗ್ಯಾಸ್ ಸಂಪರ್ಕ ರದ್ದಾಗಲಿದೆ ಎಂಬ ಇತ್ಯಾದಿ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹಬಳಕೆಯ ಗ್ಯಾಸ್ ಸಂಪರ್ಕ ಪಡೆದವರು ಇ-ಕೆವೈಸಿ ಮಾಡಿಸಿಕೊಳ್ಳಲು ಜನರು ಗ್ಯಾಸ್ ಏಜೆನ್ಸಿಗಳ ಕಚೇರಿಗಳನ್ನು ಮುತ್ತಿಗೆ ಹಾಕಿರುವ ದೃಶ್ಯ ಕರಾವಳಿಯ ಜಿಲ್ಲೆಯಲ್ಲಿ ಕಂಡುಬರುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶಗಳ ಹಿನ್ನೆಲೆ ಜನರು ಗೊಂದಲಕ್ಕೀಡಾಗಿದ್ದು, ಕಳೆದೊಂದು ವಾರದಿಂದ ಗ್ಯಾಸ್ ಏಜೆನ್ಸಿಗಳ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲೆಯ ಪ್ರಮುಖ ಗ್ಯಾಸ್ ಏಜೆಂಟ್ ಒಬ್ಬರು, ಗ್ರಾಹರೆಲ್ಲರಿಗೂ ಇ-ಕೆವೈಸಿ ಮಾಡಲು ಸೂಚನೆ ಬಂದಿರುವುದರಿಂದ ಎಲ್ಲಾ ಗ್ಯಾಸ್ ಏಜೆನ್ಸಿಗಳಲ್ಲಿ ಗ್ರಾಹಕರ ಬೆರಳಚ್ಚು ಪಡೆದು ಆಧಾರ್ ಲಿಂಕ್ ಹಾಗೂ ಇ-ಕೆವೈಸಿ ಮಾಡಿಸಲಾಗುತ್ತಿದೆ. ಆದರೆ ಮತ್ತೆ ಸಬ್ಸಿಡಿ ಸಿಗಲಿದೆ, ಡಿ. 31ರೊಳಗೆ ಈ ಪ್ರಕ್ರಿಯೆ ಮುಗಿಸಬೇಕು ಎಂಬ ವಿಷಯಗಳಿಗೂ ಇ-ಕೆವೈಸಿಗೂ ಯಾವ ಸಂಬಂಧವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ಬರುತ್ತಿರುವುದರಿಂದ ಅವರನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದರು.

“ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸಂದೇಶವೊಂದು ವೈರಲ್ ಆಗುತ್ತಿರುವ ಬಗ್ಗೆ ಮಾಹಿತಿ ಬಂದಿವೆ.ಆಧಾರ್ ದೃಢೀಕರಣವು ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಕಡ್ಡಾಯವಾಗಿದೆ. ಉಳಿದ ಬಳಕೆದಾರರಿಗೆ ಗ್ಯಾಸ್ ಸಬ್ಸಿಡಿಯ ಬಗ್ಗೆ ಪ್ರಸ್ತುತ ಯಾವುದೇ ಘೋಷಣೆ ಆಗಿರುವುದಿಲ್ಲ. ಗ್ಯಾಸ್ ಬಳಕೆದಾರರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ದಕ್ಷಿಣ ಕನ್ನಡ ಆಹಾರ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ”.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ ಗ್ಯಾಸ್ ಸಂಪರ್ಕ ಇರುವವರು ಡಿ. 31ರೊಳಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಗ್ಯಾಸ್ ಏಜೆನ್ಸಿ ನೀಡಿರುವ ಪುಸ್ತಕ ಅಥವಾ ಕಾರ್ಡ್ ಜೊತೆಗೆ ಏಜೆನ್ಸಿ ಕಚೇರಿಗೆ ಭೇಟಿ ನೀಡಿ, ಕೆವೈಸಿ ಮಾಡಿಸಬೇಕು. ಕೆವೈಸಿ ಮಾಡಿಸಿದರೆ ಜ. 1ರಿಂದ ಸಬ್ಸಿಡಿ ಬರುತ್ತದೆ. ಪ್ರಸ್ತುತ ಸಿಲಿಂಡರ್ ಗೆ 903 ರೂ. ಇದ್ದು, ಸಬ್ಸಿಡಿಯ ಬಳಿಕ 500 ರೂ.ಗಳಿಗೆ ಸಿಲಿಂಡರ್ ಸಿಗುತ್ತದೆ. ಕೆವೈಸಿ ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಗ್ಯಾಸ್ ಸಂಪರ್ಕವು ಕಮರ್ಶಿಯಲ್ ಆಗಿ ಮಾರ್ಪಡುತ್ತದೆ. ಆಗ ಸಿಲಿಂಡರ್ ಗೆ 1,400 ರೂ. ಹಣ ನೀಡಬೇಕಾಗುತ್ತದೆ ಎಂದು ಸಂದೇಶ ವೈರಲ್ ಆಗುತ್ತಿದೆ.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

1 hour ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

24 hours ago